ನವದೆಹಲಿ:ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬೆಳಗ್ಗೆ 11ಗಂಟೆಗೆ ಅಹಮದಾಬಾದ್ನ ಸರ್ದಾರ್ ಧಾಮ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಇದೇ ವೇಳೆ ಸರ್ದಾರ್ ಧಾಮ್- 2 ನೇ ಹಂತದ ಕನ್ಯಾ ಛತ್ರಾಲಯ (ಬಾಲಕಿಯರ ಹಾಸ್ಟೆಲ್)ದ ನಿರ್ಮಾಣಕ್ಕೆ ಭೂಮಿ ಪೂಜೆಯನ್ನೂ ನೆರವೇರಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, ಸರ್ದಾರ್ ಧಾಮ್ ಶೈಕ್ಷಣಿಕ ಮತ್ತು ಸಾಮಾಜಿಕ ಪರಿವರ್ತನೆ, ಸಮಾಜದ ದುರ್ಬಲ ವರ್ಗಗಳ ಉನ್ನತಿ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.