ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ- ಗ್ರಾಮೀಣ (ಪಿಎಂಎವೈ-ಜಿ) ( Pradhan Mantri Awaas Yojana - Gramin ) ಮೊದಲ ಕಂತನ್ನು ಪ್ರಧಾನಿ ನರೇಂದ್ರ ಮೋದಿ ತ್ರಿಪುರಾದ 1.47 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ವರ್ಗಾಯಿಸಿದ್ದಾರೆ.
1.47 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ PMAY-G ಯ ಮೊದಲ ಕಂತು ವರ್ಗಾಯಿಸಿದ ಮೋದಿ
ಪ್ರಧಾನಮಂತ್ರಿಯವರ ಮಧ್ಯಸ್ಥಿಕೆಯ ನಂತರ ತ್ರಿಪುರಾದ (Tripura) ವಿಶಿಷ್ಟ ಭೌಗೋಳಿಕ-ಹವಾಮಾನ ಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, 'ಕಚ್ಚಾ' ಮನೆಯ ವ್ಯಾಖ್ಯಾನವನ್ನು ಬದಲಾಯಿಸಲಾಗಿದೆ. ಇದು 'ಕಚ್ಚಾ' ಮನೆಗಳಲ್ಲಿ ವಾಸಿಸುತ್ತಿದ್ದ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಸಹಾಯ ಪಡೆಯಲು ಅನುವು ಮಾಡಿಕೊಟ್ಟಿದೆ..
ಇದರೊಂದಿಗೆ 700 ಕೋಟಿ ರೂ.ಗೂ ಹೆಚ್ಚು ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಪ್ರಧಾನಮಂತ್ರಿಯವರ ಮಧ್ಯಸ್ಥಿಕೆಯ ನಂತರ ತ್ರಿಪುರಾದ (Tripura) ವಿಶಿಷ್ಟ ಭೌಗೋಳಿಕ-ಹವಾಮಾನ ಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, 'ಕಚ್ಚಾ' ಮನೆಯ ವ್ಯಾಖ್ಯಾನವನ್ನು ಬದಲಾಯಿಸಲಾಗಿದೆ. ಇದು 'ಕಚ್ಚಾ' ಮನೆಗಳಲ್ಲಿ ವಾಸಿಸುತ್ತಿದ್ದ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಸಹಾಯ ಪಡೆಯಲು ಅನುವು ಮಾಡಿಕೊಟ್ಟಿದೆ.
ವರ್ಚ್ಯುವಲ್ ಮೂಲಕ ನಡೆದ ಈ ಸಂದರ್ಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ (Union Rural Development Minister Giriraj Singh) ಮತ್ತು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ (Tripura Chief Minister Biplab Kumar Dev) ಉಪಸ್ಥಿತರಿದ್ದರು.