ನೋಯ್ಡಾ (ನವದೆಹಲಿ):ಗಾಂಜಾ ಕಳ್ಳಸಾಗಣೆ ಸುಳಿವಿನ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸ್ ಅಧಿಕಾರಿಯನ್ನೇ ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡ ಘಟನೆ ಇಲ್ಲಿನ ಜುವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಚಂಚಾಲಿ ಗ್ರಾಮದಲ್ಲಿ ಗಾಂಜಾ ಕಳ್ಳ ಸಾಗಾಣಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಗ್ರಾಮದ ಮನೆಯೊಂದಕ್ಕೆ ತೆರಳಿದ ಪೊಲೀಸರನ್ನು ಕುಟುಂಬಸ್ಥರು ತಡೆದಿದ್ದಲ್ಲದೇ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಅಲ್ಲದೇ ಸುತ್ತಲಿನ ಜನರು ಪೊಲೀಸ್ನನ್ನು ಒತ್ತೆಯಾಳುಗಳನ್ನಾಗಿಟ್ಟುಕೊಂಡಿದ್ದ ಆರೋಪ ಕೇಳಿಬಂದಿದೆ.
ಈ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.