ನವದೆಹಲಿ:ನಾಡಿದ್ದು ನಡೆಯುವ ಬ್ರಿಟನ್ ರಾಣಿ ಎಲಿಜಬೆತ್ II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂಗ್ಲೆಂಡ್ಗೆ ತೆರಳಿದರು. ರಾಷ್ಟ್ರಪತಿಗಳು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬರುವ ಎಲ್ಲ ದೇಶಗಳ ಗಣ್ಯರು ಸರ್ಕಾರಿ ವಿಮಾನದ ಬದಲಾಗಿ ಖಾಸಗಿ ವಿಮಾನವನ್ನು ಬಳಸಿ ಬರಲು ಬ್ರಿಟನ್ ಅರಮನೆ ಕೋರಿಕೊಂಡಿತ್ತು. ಅದರಂತೆ ದ್ರೌಪದಿ ಮುರ್ಮು ಅವರು ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್ಗೆ ಹಾರಿದರು.
ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮುರ್ಮು ಅವರು ಪಯಣಿಸುತ್ತಿರುವ ಮೊದಲ ವಿದೇಶ ಪ್ರವಾಸ ಇದಾಗಿದೆ. ಭಾರತ ಸರ್ಕಾರದ ಪರವಾಗಿ ಬ್ರಿಟನ್ ರಾಣಿ ಅಗಲಿಕೆಗೆ ಸಂತಾಪ ಸೂಚಿಸಲಿದ್ದಾರೆ.