ಕರ್ನಾಟಕ

karnataka

ರಾಷ್ಟ್ರಪತಿ ರಾಮನಾಥ್ ಕೋವಿಂದ್‌‌ಗೆ ಯಶಸ್ವಿ ಬೈಪಾಸ್‌ ಸರ್ಜರಿ

By

Published : Mar 30, 2021, 5:10 PM IST

ಕೆಲವು ದಿನಗಳ ಹಿಂದೆ ಎದೆನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರಿಗೆ ಯಶಸ್ವಿ ಬೈಪಾಸ್​ ಸರ್ಜರಿ ಮಾಡಲಾಗಿದೆ.

President Ram Nath Kovind
President Ram Nath Kovind

ನವದೆಹಲಿ:ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಕಳೆದ ಶುಕ್ರವಾರ ಸೇನಾ ಸಂಶೋಧನಾ ಮತ್ತು ರೆಫರಲ್​ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್​ ಕೋವಿಂದ್,​ ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್​ಗೆ ಸ್ಥಳಾಂತರಗೊಂಡಿದ್ದರು. ಇದೀಗ ಅವರಿಗೆ ಯಶಸ್ವಿ ಬೈಪಾಸ್​ ಸರ್ಜರಿ ಮಾಡಲಾಗಿದೆ. ಈ ವಿಷಯವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಟ್ವೀಟ್​ ಮಾಡಿ ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಏಮ್ಸ್​ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಬೈಪಾಸ್​ ಸರ್ಜರಿಗೊಳಗಾಗಿದ್ದಾರೆ ಎಂದು ತಿಳಿಸಿರುವ ರಕ್ಷಣಾ ಸಚಿವರು, ಏಮ್ಸ್​​ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ರಾಷ್ಟ್ರಪತಿಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಸದ್ಯ ಕೋವಿಂದ್​ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್​ ವೈದ್ಯರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details