ಕರ್ನಾಟಕ

karnataka

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು: ರಾಷ್ಟ್ರಪತಿ

ರೂರ್ಕೆಲಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ)ಯ 18ನೇ ಸಮಾವೇಶದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕೆಂದು ಕರೆ ನೀಡಿದರು.

By

Published : Mar 21, 2021, 9:17 PM IST

Published : Mar 21, 2021, 9:17 PM IST

President Ram Nath Kovind
ರಾಷ್ಟ್ರಪತಿ ರಾಮನಾಥ್​ ಕೋವಿಂದ್​

ರೂರ್ಕೆಲಾ (ಒಡಿಶಾ): ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಾಗಿ ಪಾಲ್ಗೊಳ್ಳಬೇಕು ಎಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಕರೆ ನೀಡಿದ್ದಾರೆ.

ರೂರ್ಕೆಲಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ)ಯ 18ನೇ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, "ತಾಂತ್ರಿಕ ಕ್ಷೇತ್ರದಲ್ಲಿನ ಮಹಿಳೆಯರ ಬೆಳವಣಿಗೆ ಮತ್ತು ಉತ್ಕೃಷ್ಟತೆಯು ನಮ್ಮ ರಾಷ್ಟ್ರೀಯ ಅಭಿವೃದ್ಧಿಗೆ ಹೊಸ ಆಯಾಮ ನೀಡುತ್ತದೆ". ವಿಶೇಷವಾಗಿ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಶಾಸ್ತ್ರದಲ್ಲಿ ಮಹಿಳೆಯರು ಉನ್ನತ ಶಿಕ್ಷಣವನ್ನು ಪಡೆಯಬೇಕಾಗಿದೆ ಎಂದಿದ್ದಾರೆ.

ರಾಷ್ಟ್ರಪತಿ ರಾಮನಾಥ್​ ಕೋವಿಂದ್

ಇತ್ತೀಚಿನ ಸಮೀಕ್ಷೆಯನ್ನು ಉಲ್ಲೇಖಿಸಿದ ಅವರು, ಭಾರತದಲ್ಲಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ಮಹಿಳೆಯರ ದಾಖಲಾತಿ ಶೇಕಡಾ 20ರಷ್ಟಿದ್ದು, ನಮ್ಮ ಹೆಣ್ಣು ಮಕ್ಕಳಿಗೆ ತಾಂತ್ರಿಕ ಶಿಕ್ಷಣವನ್ನು ಪಡೆಯಲು ಪ್ರೋತ್ಸಾಹಿಸಬೇಕು ಮತ್ತು ಇತರ ಕ್ಷೇತ್ರಗಳಲ್ಲಿರುವಂತೆಯೇ ಅವರು ಉತ್ತಮ ಸಾಧನೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ನಮ್ಮ ಹೆಣ್ಣು ಮಕ್ಕಳು ಹುಡುಗರನ್ನು ಮೀರಿಸುತ್ತಿದ್ದು, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚಿನ ಚಿನ್ನದ ಪದಕಗಳನ್ನು ಪಡೆಯುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಎನ್‌ಐಟಿ ರೂರ್ಕೆಲಾದಲ್ಲಿ ಏಳು ಚಿನ್ನದ ಪದಕ ಗೆದ್ದವರಲ್ಲಿ ಮೂವರು ಮಹಿಳೆಯರಾಗಿದ್ದು, ಇತರ ಕೇಂದ್ರ ವಿಶ್ವವಿದ್ಯಾಲಯಗಳಲ್ಲೂ ಇದೇ ಪರಿಸ್ಥಿತಿ ಇದೆ. ವಿಶ್ವವಿದ್ಯಾಲಯದಲ್ಲಿನ ಒಟ್ಟು 7,116 ವಿದ್ಯಾರ್ಥಿಗಳಲ್ಲಿ ಸುಮಾರು 1,518 ಮಂದಿ ಮಹಿಳೆಯರೇ ಇದ್ದಾರೆ ಎಂದರು.

ಎನ್‌ಐಟಿ ರೂರ್ಕೆಲಾ ವಿಶ್ವವಿದ್ಯಾಲಯವು ಸುಮಾರು ಆರು ದಶಕಗಳಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದೆ. ಅಲ್ಲದೇ, ಈ ವಿಶ್ವವಿದ್ಯಾಲಯದಲ್ಲಿ 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವುದು ನನಗೆ ಸಂತೋಷವಾಗಿದೆ. 17 ದೇಶಗಳ ವಿದ್ಯಾರ್ಥಿಗಳು ಸಹ ವಿವಿಧ ಶೈಕ್ಷಣಿಕ ವಿಭಾಗಗಳಿಗೆ ದಾಖಲಾಗಿದ್ದಾರೆ ಎಂದು ನನಗೆ ತಿಳಿಸಲಾಗಿದೆ ಎಂದರು.

ಓದಿ:ಬಂಗಾಳದಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್​: ಮಹಿಳೆಯರಿಗೆ ಉದ್ಯೋಗದಲ್ಲಿ ಶೇ. 33 ಮೀಸಲಾತಿ ಸೇರಿ ಭರಪೂರ ಭರವಸೆ

ನಿಮ್ಮ ಯಶಸ್ಸನ್ನು ಭೌತಿಕ ಲಾಭದ ದೃಷ್ಟಿಯಿಂದ ನಿರ್ಣಯಿಸದೆ, ಜೀವನದಲ್ಲಿ ನೀವು ನಿಜವಾಗಿಯೂ ಏನು ಮಾಡಲು ಬಯಸುತ್ತೀರಿ ಎಂಬುದರ ಕುರಿತು ಆಲೋಚಿಸುವುದು ಉತ್ತಮ ಎಂದು ಸಲಹೆ ನೀಡಿದರು.

ನಿಮ್ಮ ಆಕಾಂಕ್ಷೆಗಳಿಗೆ ಹತ್ತಿರವಾಗುವ ಕೆಲಸವನ್ನು ಹಾಗೂ ನಿಮ್ಮ ಕುಟುಂಬಗಳು ನಿಮ್ಮ ಬಗ್ಗೆ ಹೆಮ್ಮೆ ಪಡುವಂತಹ ಕಾರ್ಯವನ್ನು ಮಾಡಿ ಎಂದ ಅವರು, ನಿಮಗೆ ಫಲಪ್ರದವೆನಿಸುವ ಮತ್ತು ಜೀವನದ ಉತ್ಕೃಷ್ಟ ಹಾದಿಯನ್ನು ನೀವೇ ಯೋಜಿಸಿ ಎಂದು ಮಾರ್ಗದರ್ಶನ ನೀಡಿದರು.

ABOUT THE AUTHOR

...view details