ಪಾಟ್ನಾ (ಬಿಹಾರ): ಹೋಳಿ ಹಬ್ಬದ ಆಚರಣೆಯ ನಂತರ ಆರಂಭವಾಗಲಿರುವ ಬಿಹಾರ ಆವೃತ್ತಿಯ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬದಲಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸುವ ಹಾಗೂ ಗಯಾದಲ್ಲಿ ಅಂತ್ಯಗೊಳ್ಳುವ ಯಾತ್ರೆಯಲ್ಲಿ ಭಾಷಣ ಮಾಡುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಹೇಳಿದ್ದಾರೆ.
ಬಿಹಾರದಲ್ಲಿ ಹೋಳಿ ಹಬ್ಬದ ಆಚರಣೆಯ ನಂತರ ಬಿಹಾರ ಪ್ರದೇಶ್ ಕಾಂಗ್ರೆಸ್ ಸಮಿತಿಯ ಭಾರತ್ ಜೋಡೋ ಯಾತ್ರೆಯ ಕೊನೆಯ ಹಂತ ಆರಂಭವಾಗಲಿದೆ. ಈ ಯಾತ್ರೆಯೂ ಪಾಟ್ನಾದ ಫುಲ್ವಾರಿ ಷರೀಫ್ನಿಂದ ಪ್ರಾರಂಭವಾಗಿ ಬೋಧ್ ಗಯಾ ತಲುಪಲಿದೆ. ಈ ಹಿಂದೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಿಹಾರ್ ಪ್ರದೇಶ್ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಯಾತ್ರೆಯ ಕೊನೆ ದಿನದಂದು ರ್ಯಾಲಿ ಉದ್ದೇಶಿಸಿ ಮಾತನಾಡಲು ಗಯಾಕ್ಕೆ ಬರಬಹುದು ಎಂಬ ಮಾತುಗಳು ಕೇಳಿ ಬಂದಿತ್ತು.
ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿ ಸದಕತ್ ಆಶ್ರಮದಲ್ಲಿ ರಾಜ್ಯಾಧ್ಯಕ್ಷ ಡಾ ಅಖಿಲೇಶ್ ಪ್ರಸಾದ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೂರನೇ ಹಂತದ ಪಾದಯಾತ್ರೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯಾಧ್ಯಕ್ಷರು ಪ್ರಿಯಾಂಕಾ ಗಾಂಧಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಪಷ್ಟ ಸೂಚನೆಗಳಿವೆ. ಪ್ರಿಯಾಂಕಾ ಗಾಂಧಿ ವಾದ್ರಾ ಗಯಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಹಾರದ ಜನರು ಕೂಡ ಪ್ರಿಯಾಂಕಾ ಗಾಂಧಿಯನ್ನು ನೋಡಬೇಕು ಹಾಗೂ ಅವರ ಮಾತುಗಳನ್ನು ಕೇಳಬೇಕು ಎಂದು ಬಹಳ ದಿನಗಳಿಂದ ಅಪೇಕ್ಷಿಸುತ್ತಿದ್ದಾರೆ ಎಂದು ತಿಳಿಸಿದರು.