ಮುಂಬೈ: ಪಾರಾಲಿ ನಿವಾಸಿ ಟಿಕ್ಟಾಕ್ ಸ್ಟಾರ್ 22 ವರ್ಷದ ಪೂಜಾ ಚವಾಣ್ ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಶಿವಸೇನೆ ನಾಯಕರೊಬ್ಬರ ಹೆಸರನ್ನು ಬಿಜೆಪಿ ನಾಯಕಿ ಚಿತ್ರಾ ವಾಘ್ ತೆಗೆದುಕೊಂಡಿದ್ದಾರೆ.
ಬೀಡ್ ಜಿಲ್ಲೆಯ ಪಾರಾಲಿ ನಿವಾಸಿ ಪೂಜಾ ಚವಾಣ್ ಆತ್ಮಹತ್ಯೆಗೆ ಸಂಬಂಧಿಸಿದ ವಿವಿಧ ಆಡಿಯೋ ತುಣುಕುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಪೂಜಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಮಹಿಳಾ ನಾಯಕಿ ಚಿತ್ರಾ ವಾಘ್, ಶಿವಸೇನಾ ಮುಖಂಡ ಮತ್ತು ರಾಜ್ಯ ಅರಣ್ಯ ಸಚಿವ ಸಂಜಯ್ ರಾಥೋಡ್ ಹೆಸರು ಎತ್ತಿದ್ದು ಚರ್ಚೆಗೆ ಕಾರಣವಾಗಿದೆ.
ಈ ಕುರಿತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಸಿಎಂ ಠಾಕ್ರೆ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆದರೆ ಅವರು ಅಥವಾ ರಾಜ್ಯ ಗೃಹ ಸಚಿವರು ಯಾವುದೇ ತನಿಖೆಗೆ ಆದೇಶಿಸಿಲ್ಲ ಎಂದು ತಿಳಿದುಬಂದಿದೆ.