ಕರ್ನಾಟಕ

karnataka

ETV Bharat / bharat

ಪಂಜಾಬ್ ಕಾಂಗ್ರೆಸ್​ ಬಿಕ್ಕಟ್ಟು: ಎಲ್ಲವೂ ಸರಿಯಾಗಲಿದೆ ಎಂದ ಮಲ್ಲಿಕಾರ್ಜುನ್​ ಖರ್ಗೆ - ಸಂಸದ ಮಲ್ಲಿಕಾರ್ಜುನ್​ ಖರ್ಗೆ

ಪಂಜಾಬ್​ ಕಾಂಗ್ರೆಸ್​ನಲ್ಲಿ ಉದ್ಭವವಾಗಿರುವ ಬಿಕ್ಕಟ್ಟು ಬಗೆಹರಿಸುವ ಕೆಲಸಕ್ಕೆ ಕೈ ಹಾಕಿರುವ ಹಿರಿಯ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಎಲ್ಲವೂ ಸರಿಯಾಗಲಿದೆ ಎಂದಿದ್ದಾರೆ.

Mallikarjun Kharge
Mallikarjun Kharge

By

Published : Jun 22, 2021, 3:43 PM IST

ಅಮೃತಸರ(ಪಂಜಾಬ್​): ಕಳೆದ ಕೆಲ ತಿಂಗಳಿಂದ ಪಂಜಾಬ್​ ಮುಖ್ಯಮಂತ್ರಿ ಕ್ಯಾ. ಅಮರಿಂದರ್​ ಸಿಂಗ್​ ವಿರುದ್ಧ ಬಹಿರಂಗವಾಗಿ ಶಾಸಕ ನವಜೋತ್​ ಸಿಂಗ್​ ಸಿಧು ಹೇಳಿಕೆ ನೀಡ್ತಿದ್ದಾರೆ. ಮುಂದಿನ ವರ್ಷ ಪಂಜಾಬ್​ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಇದು ಕಾಂಗ್ರೆಸ್​ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಕಾಂಗ್ರೆಸ್​ನ ಹಿರಿಯ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ನೇತೃತ್ವದ ಸಮಿತಿ ಮಧ್ಯಪ್ರವೇಶ ಮಾಡಿದೆ.

ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್ ಸಿಂಗ್​ ಇಂದು ಮಲ್ಲಿಕಾರ್ಜುನ್​ ಖರ್ಗೆ ನೇತೃತ್ವದ ಎಐಸಿಸಿಯ ಮೂವರು ಸದಸ್ಯರ ಸಮಿತಿ ಭೇಟಿ ಮಾಡಿದ್ದು, ತಮ್ಮ ಅಭಿಪ್ರಾಯ ಹೊರ ಹಾಕಿದ್ದಾರೆ.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಮಲ್ಲಿಕಾರ್ಜುನ್​ ಖರ್ಗೆ, ಎಲ್ಲವೂ ಸರಿಯಾಗಲಿದ್ದು, ಮುಂಬರುವ ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿ ನೇತೃತ್ವದಲ್ಲೇ ನಾವು ಹೋರಾಡಲಿದ್ದೇವೆ ಎಂದಿದ್ದಾರೆ. ಪಕ್ಷದಲ್ಲಿ ಎಲ್ಲರೂ ಒಂದೇ ಎಂದಿರುವ ಖರ್ಗೆ, ಪಂಜಾಬ್​ ಕಾಂಗ್ರೆಸ್​ನಲ್ಲಿ ಉದ್ಭವವಾಗಿರುವ ಬಿಕ್ಕಟ್ಟು ಬಗೆಹರಿಸುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿರಿ: ಚುನಾವಣೆಗಾಗಿ ಪ್ರದರ್ಶನದ ಬೊಂಬೆ ನಾನಲ್ಲ: ಸಿಎಂ ವಿರುದ್ಧ ಸಿಧು ವಾಗ್ದಾಳಿ

ಕಳೆದ ಎರಡು ದಿನಗಳ ಹಿಂದೆ ಕ್ಯಾ. ಅಮರಿಂದರ್ ಸಿಂಗ್​ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದ ಶಾಸಕ ನವಜೋತ್​ ಸಿಂಗ್​ ಸಿಧು, ಚುನಾವಣೆ ವೇಳೆ ಪ್ರಚಾರಕ್ಕೆ ಕರೆದೊಯ್ದು, ತದನಂತರ ಕಪಾಟಿನಲ್ಲಿಡಲು ನಾನು ಪ್ರದರ್ಶನದ ಬೊಂಬೆ ಅಲ್ಲ. ನೀವು ಏನು ಮಾಡುತ್ತಿದ್ದೀರಿ ಎಂದು ನೋಡುತ್ತ ಕುಳಿತುಕೊಳ್ಳುವುದು ನನ್ನ ಕೆಲಸವಲ್ಲ ಎಂದು ಹೇಳಿದ್ದರು.

ABOUT THE AUTHOR

...view details