ಕರ್ನಾಟಕ

karnataka

ETV Bharat / bharat

ಉತ್ತರಾಖಂಡ್​ ಮುಖ್ಯಮಂತ್ರಿ ಆಯ್ಕೆ: ಚುನಾವಣೆಯಲ್ಲಿ ಸೋತರೂ ಪುಷ್ಕರ್​ಗೆ ಪಟ್ಟ!

ಹೊಸ ಮುಖದ ಹುಡುಕಾಟಕ್ಕೆ ಬಿಜೆಪಿ ಹೈಕಮಾಂಡ್​ ಮುಂದಾಗಿತ್ತು. ಜತೆಗೆ ಐದಾರು ಜನರ ಹೆಸರುಗಳು ಮುಖ್ಯಮಂತ್ರಿ ರೇಸ್​ಗೆ ಕೇಳಿ ಬಂದಿದ್ದವು..

By

Published : Mar 21, 2022, 5:43 PM IST

Updated : Mar 21, 2022, 6:41 PM IST

Pushkar Singh Dhami
Pushkar Singh Dhami

ಡೆಹ್ರಾಡೂನ್ (ಉತ್ತರಾಖಂಡ್​):ಉತ್ತರಾಖಂಡ್​ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅವರು ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಸೋಲು ಕಂಡಿದ್ದರೂ ಧಾಮಿ ಅವರಿಗೆ ಬಿಜೆಪಿ ಮಣೆ ಹಾಕಿದೆ.

ರಾಜಧಾನಿ ಡೆಹ್ರಾಡೂನ್​ನಲ್ಲಿ ಸೋಮವಾರ ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿತ್ತು. ಇದರಲ್ಲಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮುಖ್ಯಮಂತ್ರಿಯಾಗಿ ಧಾಮಿ ಪದಗ್ರಹಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಯುವ ನಾಯಕರಾದ ಪುಷ್ಕರ್ ಸಿಂಗ್​ ಧಾಮಿ ವಿಧಾನಸಭೆ ಚುನಾವಣೆಯಲ್ಲಿ ಖತೀಮಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಆದ್ದರಿಂದ ಹೊಸಬರಿಗೆ ಬಿಜೆಪಿ ಮಣೆ ಹಾಕಲಿದೆ ಎಂಬ ನಿರೀಕ್ಷೆ ಇತ್ತು. ಶಾಸಕರಾದ ಸತ್​ಪಾಲ್ ಮಹಾರಾಜ್, ಧನ್​ಸಿಂಗ್ ರಾವತ್, ಕೇಂದ್ರದ ಮಾಜಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಅವರ ಹೆಸರುಗಳು ಸಹ ಸಿಎಂ ರೇಸ್​ಗೆ ಕೇಳಿ ಬಂದಿದ್ದವು. ಆದರೆ, ಕೊನೆಗೆ 10 ದಿನಗಳ ಕಾಲ ನಡೆದ ಕಸರತ್ತಿಗೆ ಬಿಜೆಪಿ ತೆರೆ ಎಳೆದಿದೆ.

ಕೇಂದ್ರದ ವೀಕ್ಷಕರಾದ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಮತ್ತು ವಿದೇಶಾಂಗ ಖಾತೆಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಸಮ್ಮುಖದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಧಾಮಿ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವೆರಿಸಲು ತೀರ್ಮಾನಿಸಲಾಗಿದೆ. ಹೊಸ ಸಿಎಂ ಆಯ್ಕೆ ಬಳಿಕ ಮಾತನಾಡಿದ ರಾಜನಾಥ್​ ಸಿಎಂ, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಪುಷ್ಕರ್ ಸಿಂಗ್ ಧಾಮಿ ಅಭಿನಂದನೆ ಸಲ್ಲಿಸುತ್ತೇನೆ. ಅವರ ನಾಯಕತ್ವದಲ್ಲಿ ಉತ್ತರಾಖಂಡ್ ವೇಗವಾದ ಅಭಿವೃದ್ದಿ ಹೊಂದುವ ನಿರೀಕ್ಷೆ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಮಣಿಪುರ ಸಿಎಂ ಆಗಿ ಬಿರೇನ್​ ಸಿಂಗ್ ಪ್ರಮಾಣ: ಭ್ರಷ್ಟಾಚಾರ ಮುಕ್ತ ರಾಜ್ಯದ ಪಣ

Last Updated : Mar 21, 2022, 6:41 PM IST

ABOUT THE AUTHOR

...view details