ಕರ್ನಾಟಕ

karnataka

ETV Bharat / bharat

ಲಖಿಂಪುರಕ್ಕೆ ತೆರಳಲು ರಾಹುಲ್‌ ಗಾಂಧಿ ನಿಯೋಗಕ್ಕೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ - uttar pradesh cm yogi adityanath

ರಾಹುಲ್ ಗಾಂಧಿಯವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ಲಖಿಂಪುರದಲ್ಲಿ ಸಾವಿಗೀಡಾದ ಕುಟುಂಬದವರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ಯುಪಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ನಿಯೋಗಕ್ಕೂ ಯುಪಿ ಸರ್ಕಾರ ಘಟನಾ ಸ್ಥಳಕ್ಕೆ ಭೇಟಿ ನೀಡಲು ಅವಕಾಶ ನಿರಾಕರಿಸಿದೆ.

Rahul Gandhi Denied Permission By UP Government To Visit Lakhimpur
ಲಖಿಂಪುರಕ್ಕೆ ತೆರಳಲು ರಾಹುಲ್‌ ಗಾಂಧಿ ನಿಯೋಗಕ್ಕೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

By

Published : Oct 6, 2021, 10:08 AM IST

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರಕ್ಕೆ ತೆರಳಲು ನಿರ್ಧರಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ನಿಯೋಗಕ್ಕೆ ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ.

ಕಳೆದ ಭಾನುವಾರ 8 ಮಂದಿ ಸಾವಿಗೀಡಾದ ಸಂಬಂಧ ಲಖಿಂಪುರ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿರೋಧ ಪಕ್ಷದ ನಾಯಕರು ಘಟನಾ ಸ್ಥಳಕ್ಕೆ ತೆರಳುವುದನ್ನು ಸರ್ಕಾರ ತಡೆಯುತ್ತಿದೆ.

ಇದಕ್ಕೂ ಮುನ್ನ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ ಬರೆದ ಕಾಂಗ್ರೆಸ್, ರಾಹುಲ್ ಗಾಂಧಿ ನೇತೃತ್ವದ ಐವರು ಸದಸ್ಯರ ನಿಯೋಗ ಲಖಿಂಪುರ ಜಿಲ್ಲೆಗೆ ಭೇಟಿ ನೀಡಲು ನಿರ್ಧರಿಸಿದ್ದು ಅನುಮತಿ ಕೋರಿತ್ತು. ಈ ಪತ್ರದಲ್ಲಿ ಯಾವುದೇ ಕಾರಣ ಅಥವಾ ಸ್ಪಷ್ಟನೆ ನೀಡದೆ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿರುವುದಕ್ಕೆ ಅಸಮಾಧಾನವನ್ನೂ ವ್ಯಕ್ತಪಡಿಸಿತ್ತು.

ಕಾಂಗ್ರೆಸ್ ನಿಯೋಗಕ್ಕೆ ಅನುಮತಿ ನಿರಾಕರಿಸಿದ ಯೋಗಿ ಸರ್ಕಾರ, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿರುವುದಾಗಿ ಸಬೂಬು ನೀಡಿದೆ.

ಇದನ್ನೂ ಓದಿ:ಅತ್ಯಾಚಾರಿಗೆ ಕೇವಲ 9 ದಿನದಲ್ಲಿ ಶಿಕ್ಷೆ ನೀಡಿದ ಕೋರ್ಟ್

ABOUT THE AUTHOR

...view details