ಕರ್ನಾಟಕ

karnataka

ETV Bharat / bharat

ಭಾರತ್ ಜೋಡೋ ನ್ಯಾಯ ಯಾತ್ರೆ: ಜನಾಂದೋಲನ ಸದಸ್ಯರೊಂದಿಗೆ ರಾಹುಲ್​ ಗಾಂಧಿ ಸಂವಾದ

Rahul Gandhi's Bharat Jodo Nyay Yatra: 'ಭಾರತ್ ಜೋಡೋ ನ್ಯಾಯ ಯಾತ್ರೆ' ಆರಂಭಿಸುವ ಮುನ್ನ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಾಮಾಜಿಕ ಸಂಘಟನೆಗಳು ಮತ್ತು ಜನಾಂದೋಲನಗಳ ಸದಸ್ಯರೊಂದಿಗೆ ಸಂವಾದ ನಡೆಸಿದ್ದಾರೆ.

By ETV Bharat Karnataka Team

Published : Jan 12, 2024, 6:47 PM IST

Updated : Jan 12, 2024, 7:04 PM IST

Rahul Gandhi  holds dialogue with civil society members ahead of his nyay yatra from Manipur
ಭಾರತ್ ಜೋಡೋ ನ್ಯಾಯ ಯಾತ್ರೆ: ಜನಾಂದೋಲನ ಸದಸ್ಯರೊಂದಿಗೆ ರಾಹುಲ್​ ಗಾಂಧಿ ಸಂವಾದ

ನವದೆಹಲಿ: ಮಣಿಪುರದ ಇಂಫಾಲ್‌ನಿಂದ ಜನವರಿ 14ರಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ನ್ಯಾಯ ಯಾತ್ರೆ' ಆರಂಭವಾಗಲಿದೆ. ಇದಕ್ಕೂ ಮುನ್ನ ಅವರು ಸಾಮಾಜಿಕ ಸಂಘಟನೆಗಳು ಮತ್ತು ಜನಾಂದೋಲನಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದ ಭಾರತ್ ಜೋಡೋ ಯಾತ್ರೆ ಮಾದರಿಯಲ್ಲಿ ರಾಹುಲ್​ ಗಾಂಧಿ ಮಣಿಪುರದಿಂದ ಮಹಾರಾಷ್ಟ್ರಕ್ಕೆ ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮೊದಲು ಈ ಯಾತ್ರೆ ಜರುಗಲಿದೆ. ಇದಕ್ಕೂ ಮುಂಚಿತವಾಗಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್ ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ಮಾಡಿದ್ದಾರೆ.

ಸಂಸದ ರಾಹುಲ್​ ಜೊತೆ ಸಂವಾದದಲ್ಲಿ ಪಾಲ್ಗೊಂಡ ಪ್ರತಿನಿಧಿಗಳು ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಮಹಿಳೆಯರು, ನಿರುದ್ಯೋಗಿ ಯುವಕರು ಮತ್ತು ಅಸಂಘಟಿತ ಕಾರ್ಮಿಕರು ಸೇರಿದಂತೆ ದೇಶದಾದ್ಯಂತ ಸಾಮಾಜಿಕ ಗುಂಪುಗಳ 'ನ್ಯಾಯ'ದ ಪ್ರಸ್ತಾಪಿಸಿದರು. ಈ ಸಂಘಟನೆಗಳ ಸದಸ್ಯರ ಎಲ್ಲ ಸಲಹೆಗಳನ್ನು ಸ್ವಾಗತಿಸಿದ ರಾಹುಲ್​ , ಯಾತ್ರೆಯ ಮೂಲಕ 'ನ್ಯಾಯ'ಕ್ಕಾಗಿ ಹೋರಾಡುವ ತಮ್ಮ ಸಂಕಲ್ಪವನ್ನು ವ್ಯಕ್ತಪಡಿಸಿದರು. ಅಲ್ಲದೇ, ನ್ಯಾಯಕ್ಕಾಗಿ ಹೋರಾಡುವ ಎಲ್ಲರಿಗೂ ತಮ್ಮ ಯಾತ್ರೆಯನ್ನು ವೇದಿಕೆಯಾಗಿ ಬಳಸಿಕೊಳ್ಳುವಂತೆಯೂ ಸಲಹೆ ನೀಡಿದರು.

ಪ್ರಧಾನಿ ಮೋದಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ಆಗುತ್ತಿರುವ ಅನ್ಯಾಯವನ್ನು ಎದುರಿಸಲು ರಾಹುಲ್​ ಗಾಂಧಿ ಕರೆ ನೀಡಿದರು. ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು ಚಳವಳಿಗಳಲ್ಲಿ ತೊಡಗಿರುವ ಮತ್ತು ಓರ್ವ ವ್ಯಕ್ತಿಯಾಗಿ ನ್ಯಾಯಕ್ಕಾಗಿ ಹೋರಾಡುವ ಎಲ್ಲರ ನಡುವಿನ ಸಹಭಾಗಿತ್ವವು ಈಗ ನಿರ್ಣಾಯಕವಾಗಿದೆ ಎಂಬುವುದಾಗಿಯೂ ಅವರು ಅಭಿಪ್ರಾಯಪಟ್ಟರು ಎಂದು ಕಾಂಗ್ರೆಸ್​ ತಿಳಿಸಿದೆ. ಈ ಸಂವಾದದಲ್ಲಿ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಹಿರಿಯ ನಾಯಕ ದಿಗ್ವಿಜಯ ಸಿಂಗ್ ಪಾಲ್ಗೊಂಡಿದ್ದರು.

6700 ಕಿ.ಮೀ. ಯಾತ್ರೆ: ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ರಾಹುಲ್​ ಗಾಂಧಿ ಮಣಿಪುರದಿಂದ ಮಹಾರಾಷ್ಟ್ರದ ಮುಂಬೈಗೆ ಮುನ್ನಡೆಸಲಿದ್ದಾರೆ. ಸುಮಾರು 100 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ 15 ರಾಜ್ಯಗಳ ಮೂಲಕ 6,700 ಕಿ.ಮೀ. ದೂರ ಯಾತ್ರೆ ಸಾಗಲಿದೆ. ಈ ಬಾರಿ ಬಸ್‌ನಲ್ಲಿ ರಾಹುಲ್ ತಮ್ಮ ಯಾತ್ರೆ ಕೈಗೊಳ್ಳಲಿದ್ದು, ಹಲವಾರು ಕಡೆಗಳಲ್ಲಿ ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಇದು ಚುನಾವಣಾ ಯಾತ್ರೆಯಲ್ಲ, ರಾಜಕೀಯ ಯಾತ್ರೆ ಎಂದಿರುವ ಕಾಂಗ್ರೆಸ್, ಈ ಯಾತ್ರೆ ಜನರಿಗೆ ಆಗಿರುವ ಅನ್ಯಾಯವನ್ನು ಎತ್ತಿ ತೋರಿಸಲಿದ್ದು, ಜನರ ಸಮಸ್ಯೆಗಳನ್ನು ಆಲಿಸಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ:'ಭಾರತ್ ಜೋಡೋ ನ್ಯಾಯ ಯಾತ್ರೆ'ಗೆ ಇನ್ನೂ ಅನುಮತಿ ನೀಡದ ಅಸ್ಸೋಂ ಸರ್ಕಾರ: ಕಾಂಗ್ರೆಸ್​ ಗರಂ

Last Updated : Jan 12, 2024, 7:04 PM IST

ABOUT THE AUTHOR

...view details