ಕರ್ನಾಟಕ

karnataka

ಕೇಂದ್ರದಲ್ಲಿ 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರವಿದೆ: ರಾಹುಲ್ ಗಾಂಧಿ

By

Published : Dec 2, 2020, 1:26 PM IST

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಂದ್ರವನ್ನು 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರ ಎಂದು ಟೀಕಿಸಿದ್ದಾರೆ.

Rahul Gandhi
Rahul Gandhi

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಕೃಷಿ ಮಸೂದೆಗಳ ವಿರುದ್ಧ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೇಂದ್ರವನ್ನು 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರ ಎಂದು ಕರೆದಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುತ್ತದೆ ಎಂದು ಹೇಳಿದ್ದರು. ಆದರೆ ಈಗ ಅವರು ಏನು ಮಾಡಿದ್ದಾರೆ?, ತಮ್ಮ ಸ್ನೇಹಿತರ ಆದಾಯವನ್ನು ನಾಲ್ಕು ಪಟ್ಟು ಹೆಚ್ಚಿಸಿ, ರೈತರ ಆದಾಯವನ್ನು ಅರ್ಧದಷ್ಟು ಕಡಿಮೆ ಮಾಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಕಳೆದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ನೂತನ ಕೃಷಿ ಮಸೂದೆಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಮುಂದಾಯಿತು. ಆದರೆ ರೈತರು ಕೇಂದ್ರದ ಈ ಬೇಡಿಕೆಯನ್ನು ತಿರಸ್ಕರಿಸಿದ್ದು, ಪ್ರತಿಭಟನೆ ಮುಂದುವರೆಸಿದ್ದಾರೆ.

ಓದಿ:ಬೀದಿಯಲ್ಲಿ ಕುಳಿತು ಅನ್ನದಾತರು ಪ್ರತಿಭಟನೆ, ಟಿವಿಯಲ್ಲಿ ಸುಳ್ಳಿನ ಭಾಷಣ: ಮೋದಿ ವಿರುದ್ಧ ರಾಹುಲ್​ ವ್ಯಂಗ್ಯ

ABOUT THE AUTHOR

...view details