ಕರ್ನಾಟಕ

karnataka

ETV Bharat / bharat

ವಯನಾಡ್‌ನಲ್ಲಿ ಗಾಂಧಿ ಫೋಟೋಗೆ ಹಾನಿ: ರಾಹುಲ್ ಗಾಂಧಿ ಆಪ್ತ ಸಹಾಯಕ ಸೇರಿ ನಾಲ್ವರ ಬಂಧನ - ಈಟಿವಿ ಭಾರತ ಕರ್ನಾಟಕ

ಕೇರಳದ ವಯನಾಡ್​ನಲ್ಲಿರುವ ರಾಹುಲ್ ಗಾಂಧಿ ಕಚೇರಿಯಲ್ಲಿ ಮಹಾತ್ಮ ಗಾಂಧಿ ಫೋಟೋಗೆ ಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕಾಂಗ್ರೆಸ್​ ಕಾರ್ಯಕರ್ತರನ್ನು ಬಂಧಿಸಲಾಗಿದೆ.

MP Rahul Gandhi office in Wayanad
MP Rahul Gandhi office in Wayanad

By

Published : Aug 19, 2022, 4:59 PM IST

ವಯನಾಡ್​ (ಕೇರಳ): ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಇತ್ತೀಚೆಗೆ ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ಮಾಡಿದ್ದು, ಮಹಾತ್ಮ ಗಾಂಧಿ ಪೋಟೋಗೆ ಹಾನಿ ಉಂಟಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಸೇರಿದಂತೆ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ಕಲ್ಪೆಟ್ಟ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಜುಲೈ 24ರಂದು ವಯನಾಡ್​​ನಲ್ಲಿರುವ ರಾಹುಲ್ ಗಾಂಧಿ ಕಚೇರಿಗೆ ನುಗ್ಗಿದ್ದ ಎಸ್‌ಎಫ್‌ಐ ಕಾರ್ಯಕರ್ತರು ದಾಂಧಲೆ ನಡೆಸಿದ್ದರು. ಈ ವೇಳೆ ಕಚೇರಿಯೊಳಗಿನ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಲ್ಲದೇ, ಎಸ್‌ಎಫ್‌ಐ ಧ್ವಜಗಳನ್ನೂ ಹಾರಿಸಿದ್ದರು.

ಸುಳ್ಳು ಪ್ರಚಾರ ನಡೆಸಿದ್ದ ಕಾಂಗ್ರೆಸ್​: ಇದರ ಲಾಭ ಪಡೆದುಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು, ಎಸ್‌ಎಫ್‌ಐ ಕಾರ್ಯಕರ್ತರು ಗಾಂಧೀಜಿಯ ಭಾವಚಿತ್ರ ಧ್ವಂಸ ಮಾಡಿದ್ದಾರೆಂದು ವ್ಯಾಪಕ ಪ್ರಚಾರ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಎಸ್​​ಎಫ್​ಐ, ಕಾಂಗ್ರೆಸ್​ ಕಾರ್ಯಕರ್ತರೇ ರಾಷ್ಟ್ರಪಿತನ ಭಾವಚಿತ್ರಕ್ಕೆ ಹಾನಿ ಉಂಟು ಮಾಡಿದ್ದಾರೆಂಬ ಪ್ರತಿ ಆರೋಪ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು ಸಂಪೂರ್ಣ ತನಿಖೆ ನಡೆಸಿದ್ದರು.

ತನಿಖೆ ವೇಳೆ ಸತ್ಯಾಂಶ ಬಯಲು: ತನಿಖೆಯ ವೇಳೆ ರಾಹುಲ್ ಗಾಂಧಿ ಅವರ ಪಿಎ ರತೀಶ್ ಕುಮಾರ್, ಸಂಸದರ ಕಚೇರಿ ಸಿಬ್ಬಂದಿ, ರಾಹುಲ್​​ ಎಸ್ ರವಿ, ಕಾಂಗ್ರೆಸ್ ಕಾರ್ಯಕರ್ತರಾದ ನೌಶಾದ್ ಮತ್ತು ಮುಜೀಬ್​ ಅವರು ಭಾವಚಿತ್ರ ಧ್ವಂಸ ಮಾಡಿದ್ದು ದೃಢಗೊಂಡಿದೆ. ಇದೀಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರತೀಶ್ ಖುದ್ದಾಗಿ ಸಾಕ್ಷಿ ನುಡಿದಿದ್ದಾರೆ.

ಎಸ್​​ಎಫ್​ಐ ಕಾರ್ಯಕರ್ತರು ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಯಾವುದೇ ರೀತಿಯ ಹಾನಿಯಾಗಿರಲಿಲ್ಲ. ವೈರಲ್​ ಆಗಿರುವ ವಿಡಿಯೋದಲ್ಲೂ ಇದು ಸ್ಪಷ್ಟವಾಗಿ ಗೋಚರಿಸಿದೆ. ಆದರೆ, ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್​​ ಈ ವಿಚಾರವನ್ನಿಟ್ಟುಕೊಂಡು ವ್ಯಾಪಕವಾಗಿ ಪ್ರಚಾರ ಮಾಡಿತ್ತು. ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಎಸ್​​ಎಫ್​ಐ ಹಾನಿ ಉಂಟು ಮಾಡಿದೆ ಎಂಬ ಆರೋಪ ಮಾಡಿದ್ದರು.

ಇದನ್ನೂ ಓದಿ:ವಯನಾಡ್​ನ ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ಎಸ್‌ಎಫ್‌ಐ ಕಾರ್ಯಕರ್ತರ ದಾಂಧಲೆ

ಈ ಪ್ರಕರಣದಲ್ಲಿ ಎಸ್​​ಎಪ್​ಐನ 29 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​,​ "ನಾವು ಇಂತಹ ಹಿಂಸಾಚಾರಕ್ಕೆ ಕರೆ ನೀಡಿರಲಿಲ್ಲ. ಜಿಲ್ಲಾ ಸಮಿತಿ ಅನುಮತಿ ಇಲ್ಲದೇ ಎಸ್​​ಎಫ್​ಐ ಕಾರ್ಯಕರ್ತರು ಮೆರವಣಿಗೆ ನಡೆಸಿದ್ದರು" ಎಂದು ತಿಳಿಸಿದ್ದರು.

ರಾಹುಲ್ ವಿರುದ್ಧ ಪ್ರತಿಭಟನೆಗೆ ಕಾರಣವೇನು? ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ವಯನಾಡು ಸಂಸದೀಯ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆದ್ದಿದ್ದ ರಾಹುಲ್​ ಗಾಂಧಿ, ಪರಿಸರ ಸೂಕ್ಷ್ಮ ವಲಯ ಸಂಬಂಧ ಮಧ್ಯಪ್ರವೇಶ ಮಾಡುತ್ತಿಲ್ಲ ಎಂದು ಆರೋಪಿಸಿ ಎಸ್‌ಎಫ್‌ಐ ಕಾರ್ಯಕರ್ತರು ಕಚೇರಿಗೆ ನುಗ್ಗಿ ಗಲಾಟೆ ಮಾಡಿದ್ದರು.

ABOUT THE AUTHOR

...view details