ಕರ್ನಾಟಕ

karnataka

By

Published : Jul 23, 2021, 12:07 AM IST

Updated : Jul 23, 2021, 3:50 PM IST

ETV Bharat / bharat

ಕುಂಭದ್ರೋಣ ಮಳೆಗೆ ನಲುಗಿದ ಮಹಾರಾಷ್ಟ್ರ.. ಭೂ ಕುಸಿತದಿಂದಾಗಿ ಈವರೆಗೆ 36 ಜನರ ದುರ್ಮರಣ

ಧಾರಾಕಾರ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, 30 ಜನ ಅವಶೇಷಗಳಡಿ ಸಿಲುಕಿದ್ದಾರೆ. ಈಗಾಗಲೇ 36 ಜನರ ಮೃತದೇಹ ಹೊರ ತೆಗೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ.

ಕುಂಭದ್ರೋಣ ಮಳೆಗೆ ನಲುಗಿದ ಮಹಾರಾಷ್ಟ್ರ
ಕುಂಭದ್ರೋಣ ಮಳೆಗೆ ನಲುಗಿದ ಮಹಾರಾಷ್ಟ್ರ

ರಾಯಗಢ: ಕುಂಭದ್ರೋಣ ಮಳೆಗೆ ಮಹಾರಾಷ್ಟ್ರದ ಹಲವು ಭಾಗಗಳು ನಲುಗಿ ಹೋಗಿವೆ. ನಿರಂತರ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿದ್ದು, ಕೆಲವೆಡೆ ಭೂ ಕುಸಿತ ಉಂಟಾಗಿದೆ. ರಾಯಗಢ​ ಜಿಲ್ಲೆಯ ಮಹಡ್ ತಾಲೂಕಿನ ಕಲೈ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿದ್ದು, 15 ಜನರನ್ನು ರಕ್ಷಣೆ ಮಾಡಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

32 ಮಂದಿ ಮೃತದೇಹ ಹೊರಕ್ಕೆ

"ಭೂಕುಸಿತದಿಂದಾಗಿ ಜಿಲ್ಲೆಯಲ್ಲಿ ಒಟ್ಟು 36 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ 32 ಮಂದಿ ತಲೈನಲ್ಲಿ ಮತ್ತು 4 ಮಂದಿ ಸಖರ್ ಸುತಾರ್ ವಾಡಿಯಲ್ಲಿ ಸಾವನ್ನಪ್ಪಿದ್ದಾರೆ" ಎಂದು ರಾಯಗಢ ಜಿಲ್ಲಾಧಿಕಾರಿ ನಿಧಿ ಚೌಧರಿ ತಿಳಿಸಿದ್ದಾರೆ. ಧಾರಾಕಾರ ಮಳೆ ಮತ್ತು ಪ್ರವಾಹವು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮಳೆ ಪ್ರಮಾಣ ಕಡಿಮೆಯಾದ ಬಳಿಕ ಕಾರ್ಯಾಚರಣೆ ಮುಂದುವರಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕುಂಭದ್ರೋಣ ಮಳೆಗೆ ನಲುಗಿದ ಮಹಾರಾಷ್ಟ್ರ

ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ನಂತರ ಜಿಲ್ಲೆಯ ವಿವಿಧ ಪರಿಹಾರ ಕಾರ್ಯಾಚರಣೆಗಳಿಂದ ಈವರೆಗೆ 1,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಅವಶೇಷಗಳ ಒಳಗೆ 30 ಜನರು ಸಿಕ್ಕಿಬೀಳುತ್ತಾರೆ ಎಂಬ ಆತಂಕವೂ ಇದೆ ಎಂದು ತಿಳಿಸಿದ್ದಾರೆ. ರಾಯಗಢದಲ್ಲಿ ನಾಲ್ಕು ಭೂಕುಸಿತ ಘಟನೆಗಳು ವರದಿಯಾಗಿವೆ.

ನದಿಯ ನೀರಿನ ಮಟ್ಟ ಏರಿಕೆ:

ಕೊಲ್ಹಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ರಾಜಾರಾಮ್ ವೇರ್‌ನಲ್ಲಿ ಪಂಚಗಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ರಾಜರಾಮ್​ವೇರ್​ನಲ್ಲಿ ನದಿಯ ನೀರಿನ ಮಟ್ಟ 41.2 ಅಡಿಯಷ್ಟಿದೆ. ಇದು 43 ಅಡಿಗಳ ಅಪಾಯದ ಮಟ್ಟಕ್ಕಿಂತ ಕೇವಲ 1.8 ಅಡಿ ಮಾತ್ರ ಕಡಿಮೆಯಿದೆ.

ಸೇನೆಯ ನೆರವು ಕೋರಿದ ಸಚಿವೆ:

ಏತನ್ಮಧ್ಯೆ, ಮಹಡ್​ನಲ್ಲಿ ಸಿಕ್ಕಿಬಿದ್ದ ಜನರನ್ನು ರಕ್ಷಿಸಲು ಮಹಾರಾಷ್ಟ್ರ ಸರ್ಕಾರ ಕೇಂದ್ರ ಸರ್ಕಾರ ಮತ್ತು ಸೇನೆಯ ನೆರವು ಕೋರಿದೆ ಎಂದು ರಾಯಗಢ ಉಸ್ತುವಾರಿ ಸಚಿವೆ ಅದಿತಿ ಎಸ್. ತತ್ಕರೆ ಮಾಹಿತಿ ನೀಡಿದರು.

47 ಗ್ರಾಮಗಳ ಸಂಪರ್ಕ ಕಡಿತ:

ಧಾರಾಕಾರ ಮಳೆಯಿಂದಾಗಿ ಸುಮಾರು 47 ಗ್ರಾಮಗಳ ಸಂಪರ್ಕ ಕಡಿತವಾಗಿದ್ದು, 965 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಭೂ ಕುಸಿತದಿಂದಾಗಿ 32 ಜನರ ದುರ್ಮರಣ!

ಜಾಗ್ರತೆಯಿಂದಿರಿ

ಭಾರಿ ಮಳೆಯಿಂದಾಗಿ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದೆ. ವಿಪತ್ತು ನಿರ್ವಹಣಾ ಘಟಕಗಳು ಮತ್ತು ಇಲಾಖೆಗಳ ಅಧಿಕಾರಿಗಳು ಜಾಗರೂಕರಾಗಿರಿ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ಆರಂಭಿಸಿ ಎಂದು ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವುದರಿಂದ ರೆಡ್​ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಸ್ಥಳಕ್ಕೆ ಎನ್​ಡಿಆರ್​ಎಫ್​ ತಂಡಗಳು ಭೇಟಿ ನೀಡಿವೆ.

ಸಿಎಂ ಉದ್ಧವ್ ಠಾಕ್ರೆ ಜತೆ ಮಾತನಾಡಿದ ಪಿಎಂ ಮೋದಿ:

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರೊಂದಿಗೆ ಭಾರಿ ಮಳೆ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೆಲವು ಭಾಗಗಳ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಚರ್ಚಿಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಮಹಾರಾಷ್ಟ್ರದ ರಾಯಗಢದಲ್ಲಿ ಅಪಘಾತ ಸಂಭವಿಸಿದ ಸುದ್ದಿ ತಿಳಿದು ಬಹಳ ಬೇಸರವಾಯಿತು. ಈ ನಿಟ್ಟಿನಲ್ಲಿ ನಾನು ಸಿಎಂ ಉದ್ಧವ್ ಠಾಕ್ರೆ ಮತ್ತು ಎನ್‌ಡಿಆರ್​ಡಿಎಫ್​ ಡಿಜಿ ಜತೆ ಮಾತನಾಡಿದ್ದೇನೆ. ಎನ್​ಡಿಆರ್​ಎಫ್​ ತಂಡ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕೇಂದ್ರವು ಅಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಇದನ್ನೂ ಓದಿ:Watch video: ನಿರಂತರ ಮಳೆಗೆ ಧಾರವಾಡ ತತ್ತರ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಜಾನುವಾರು

Last Updated : Jul 23, 2021, 3:50 PM IST

ABOUT THE AUTHOR

...view details