ಕರ್ನಾಟಕ

karnataka

By

Published : Nov 16, 2020, 7:28 AM IST

ETV Bharat / bharat

ದೂರು ನೀಡಿದ್ದಕ್ಕೆ ಅತ್ಯಾಚಾರ ಸಂತ್ರಸ್ತೆ, ಆಕೆ ಮಗಳಿಗೆ ಬೆಂಕಿ ಹಚ್ಚಿದ ಕಾಮುಕರು ಅರೆಸ್ಟ್​

ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನೋರ್ವ ಪ್ರಕರಣ ದಾಖಲಾಗುತ್ತಿದ್ದಂತೆ ಸಂತ್ರಸ್ತೆ ಮತ್ತು ಆಕೆ ಮಗಳಿಗೆ ಬೆಂಕಿ ಹಚ್ಚಿದ್ದಾನೆ. ರಾಜಸ್ಥಾನದಲ್ಲಿ ಪ್ರಕರಣ ನಡೆದಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

rajasthan-rape-survivor-and-daughter-set-ablaze-by-accused
ದೂರು ದಾಖಲಿಸಿದ ಅತ್ಯಾಚಾರ ಸಂತ್ರಸ್ತೆ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಇಟ್ಟ ಆರೋಪಿ ಸೆರೆ.

ಜೈಪುರ:ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಕ್ಕಾಗಿ ಆರೋಪಿಗಳು ಸಂತ್ರಸ್ತೆ ಹಾಗೂ ಆಕೆಯ ಮಗಳ ಮೇಲೆ ಪಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ.

ಠಾಣಾಧಿಕಾರಿ ಯಶ್ವಂತ್ ಸಿಂಗ್​ ಮಾಹಿತಿ

ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು ತಿಳಿಯುತ್ತಿದ್ದಂತೆ, ಅತ್ಯಾಚಾರ ಸಂತ್ರಸ್ತೆ ಹಾಗು ಆಕೆಯ ಮಗಳ ಮೇಲೆ ಆರೋಪಿಗಳು ದಾಳಿ ನಡೆಸಿದ್ದಾರೆ. ದೂರಿನ ಆಧಾರದ ಮೇಲೆ ಕಾಮುಕ ಲೆಖ್ರಾಜ್ ಮತ್ತು ಆತನ ಮೂವರು ಮಿತ್ರರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ತಾಯಿ ಹಾಗೂ ಮಗಳಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ:ಒಬ್ಬಂಟಿಯಾಗಿದ್ದ ಮಹಿಳೆ ಮನೆಗೆ ಆರೋಪಿ ಲೆಖ್ರಾಜ್​ ತೆರಳಿ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾನೆ. ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದಾದ ನಂತರ ಆರೋಪಿ ಮಹಿಳೆಗೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎನ್ನಲಾಗ್ತಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ತಾಯಿ-ಮಗಳನ್ನು ರಕ್ಷಿಸಿ ಜೈಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ.

ABOUT THE AUTHOR

...view details