ಕರ್ನಾಟಕ

karnataka

By

Published : Mar 22, 2021, 10:50 AM IST

ETV Bharat / bharat

ಅಲ್ಲಿರುವುದು 'ಮಹಾರಾಷ್ಟ್ರ ವಸೂಲಿ ಅಘಾಡಿ' ಸರ್ಕಾರ; ಸಿ.ಟಿ. ರವಿ

ಮಹಾರಾಷ್ಟ್ರವನ್ನು ಮಹಾ ವಸೂಲಿ ಅಘಾಡಿ ಸರ್ಕಾರ ಆಡಳಿತ ನಡೆಸುತ್ತಿದೆ. ಎನ್‌ಸಿಪಿ ಸಚಿವರೊಬ್ಬರಿಂದ ಗೃಹ ಸಚಿವರು ಆದೇಶಗಳನ್ನು ತೆಗೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಿ.ಟಿ. ರವಿ ಕಿಡಿಕಾರಿದರು.

CT Ravi
ಸಿ.ಟಿ.ರವಿ

ಮುಂಬೈ:ಮಹಾರಾಷ್ಟ್ರದ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ ಪಕ್ಷಗಳ ಮೈತ್ರಿ ಸರ್ಕಾರವನ್ನ ‘ಮಹಾ ವಿಕಾಸ ಅಘಾಡಿ’ ಬದಲಿಗೆ 'ಮಹಾರಾಷ್ಟ್ರ ವಸೂಲಿ ಅಘಾಡಿ' ಎಂದು ಮರುನಾಮಕರಣ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ಆರೋಪಗಳ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಮಹಾರಾಷ್ಟ್ರವನ್ನು ಮಹಾ ವಸೂಲಿ ಅಘಾಡಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ನಾನು ಭಾವಿಸುತ್ತೇನೆ. ಎನ್‌ಸಿಪಿ ಸಚಿವರೊಬ್ಬರಿಂದ ಗೃಹ ಸಚಿವರು ಆದೇಶಗಳನ್ನು ತೆಗೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಅವರನ್ನು ಸಂಪುಟದಿಂದ ತೆಗೆದುಹಾಕಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಪರಮ್​ ಬೀರ್​ ಸಿಂಗ್ ಅವರ ಪತ್ರ 'ಮಹಾ 'ಸರ್ಕಾರದ ಮೇಲೆ ಪರಿಣಾಮ ಬೀರಲ್ಲ : ಶರದ್​ ಪವಾರ್

ಪ್ರಸ್ತುತ ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್ ಆಗಿ ನೇಮಕಗೊಂಡಿರುವ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್​ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದು, ಅಮಾನತುಗೊಂಡ ಎಪಿಐ ಸಚಿನ್​ ವಾಜೆ ಅವರಿಗೆ ಪ್ರತಿ ತಿಂಗಳು 100 ಕೋಟಿ ರೂ. ವಸೂಲಿ ಮಾಡುವಂತೆ ಅನಿಲ್ ದೇಶ್​ಮುಖ್ ಹೇಳಿದ್ದರು ಎಂದು ಆರೋಪಿಸಿದ್ದರು.

ABOUT THE AUTHOR

...view details