ಶ್ರಾವಸ್ತಿ( ಉತ್ತರ ಪ್ರದೇಶ) :ಶ್ರಾವಸ್ತಿ ಜಿಲ್ಲೆಯ ಐಕೌನಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 730 ರಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೀತಾದ್ವಾರದ ಬಳಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶೈಲೇಂದ್ರ ಕುಮಾರ್ (30), ಮುಖೇಶ್ ಕುಮಾರ್ (28), ರಮಾ ದೇವಿ (42), ಹರೀಶ್ ಕುಮಾರ್ (42), ಅಮಿತ್ ಗುಪ್ತಾ ಅಲಿಯಾಸ್ ವೀರು (8), ಪುಟ್ಟಿಲಾಲ್ ಅಲಿಯಾಸ್ ಅರ್ಜುನ್ (25) ಎಂದು ಗುರುತಿಸಲಾಗಿದೆ. ಬಬ್ಲು (34), ಸುಂದರ (30), ಸುರೇಶ್ ಕುಮಾರ್ (42), ನೀತು (28), ರೋಹಿತ್ (8), ನಾಂಕೆ (35), ನೀಲಂ ಮತ್ತು ಲಾಡೋ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. ಲುಧಿಯಾನದಿಂದ ಇಕೌನಾ ಪ್ರದೇಶದ ಮಾರ್ಗವಾಗಿ ಬರುತ್ತಿದ್ದಾಗ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿರುವ ಕಾರಣ ಬಹ್ರೈಚ್ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
"ವಾಹನದಲ್ಲಿ ಒಟ್ಟು 14 ಮಂದಿ ಇದ್ದರು. ಕಾರು ಮರಕ್ಕೆ ಡಿಕ್ಕಿ ಹೊಡೆದ ನಂತರ ಪಕ್ಕದಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ಬಳಿಕ ಅದನ್ನು ಜೆಸಿಬಿಯಿಂದ ಹೊಗೆ ತೆಗೆಯಲಾಯಿತು. ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಗಾಯಾಳುಗಳನ್ನು ಪೊಲೀಸರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮೊದಲಿಗೆ ಗಾಯಾಳುಗಳನ್ನು ಐಕೌನಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ನಂತರ, ಐವರ ಸ್ಥಿತಿ ಗಂಭೀರವಾದ ಕಾರಣ ಬಹ್ರೈಚ್ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ" ಎಂದು ಶ್ರಾವಸ್ತಿ ಎಸ್ಪಿ ಪ್ರಾಚಿ ಸಿಂಗ್ ತಿಳಿಸಿದ್ದಾರೆ.