ಕರ್ನಾಟಕ

karnataka

ಖಾಸಗಿ ಬ್ಯಾಂಕ್ ಎಟಿಎಂನಲ್ಲಿ ನಾಲ್ಕೂವರೆ ಲಕ್ಷ ರೂ. ದರೋಡೆ

By

Published : Sep 18, 2021, 1:16 PM IST

ಖಾಸಗಿ ಬ್ಯಾಂಕ್ ಎಟಿಎಂನಲ್ಲಿ ದುಷ್ಕರ್ಮಿಗಳು ನಾಲ್ಕೂವರೆ ಲಕ್ಷ ರೂಪಾಯಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಖಾಸಗಿ ಬ್ಯಾಂಕ್ ಎಟಿಎಂ
ಖಾಸಗಿ ಬ್ಯಾಂಕ್ ಎಟಿಎಂ

ರಾಣಿಪೇಟೆ(ತಮಿಳುನಾಡು): ಜಿಲ್ಲೆಯ ಪೆರುಂಗಲತೂರು ಪ್ರದೇಶದ ಖಾಸಗಿ ಬ್ಯಾಂಕ್ ಎಟಿಎಂನಲ್ಲಿ ದುಷ್ಕರ್ಮಿಗಳು ನಾಲ್ಕೂವರೆ ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸೆಪ್ಟೆಂಬರ್​ 16 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಖಾಸಗಿ ಬ್ಯಾಂಕ್ ಎಟಿಎಂನಲ್ಲಿ ನಾಲ್ಕೂವರೆ ಲಕ್ಷ ರೂ. ದರೋಡೆ

ಎಟಿಎಂಗೆ ಯಾವುದೇ ಭದ್ರತಾ ಸಿಬ್ಬಂದಿಯನ್ನು ನೇಮಿಸಿಲ್ಲ ಹಾಗೂ ಸಿಸಿಟಿವಿ ಕೂಡಾ ಅಳವಡಿಸಿಲ್ಲ ಎಂದು ತಿಳಿದು ಬಂದಿದೆ. ಖದೀಮರು, ವೆಲ್ಡಿಂಗ್​ ಕಟರ್​ಗಳನ್ನು ಬಳಸಿ ಮಷಿನ್​ ಕತ್ತರಿಸಿ ಹಣ ಹೊತ್ತೊಯ್ದಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದ ರಾಣಿಪೇಟೆ ಪೊಲೀಸ್ ವರಿಷ್ಠಾಧಿಕಾರಿ ದೀಪಾ ಸತ್ಯನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD Case: ತನಿಖಾ ವರದಿ ಸಲ್ಲಿಕೆ ಬಗ್ಗೆ ಸೆ.27ರಂದು ಹೈಕೋರ್ಟ್​ ನಿರ್ಧಾರ

ABOUT THE AUTHOR

...view details