ಕರ್ನಾಟಕ

karnataka

By

Published : Mar 7, 2023, 2:44 PM IST

ETV Bharat / bharat

ಆರ್​ಎಸ್​ಎಸ್​​ ಮೂಲಭೂತವಾದಿ ಸಂಘಟನೆ: ಲಂಡನ್​ನಲ್ಲಿ ರಾಹುಲ್ ಗಾಂಧಿ ಆರೋಪ

ಆರೆಸ್ಸೆಸ್ ಒಂದು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್​ ಸಂಘಟನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಲಂಡನ್​ನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆರೆಸ್ಸೆಸ್ ಮೂಲಭೂತವಾದಿ ಸಂಘಟನೆ: ಲಂಡನ್​ನಲ್ಲಿ ರಾಹುಲ್ ಗಾಂಧಿ ಆರೋಪ
Rahul Gandhi in London

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆಯಾಗಿದೆ ಮತ್ತು ಅದು ಭಾರತದ ಬಹುತೇಕ ಸಂಸ್ಥೆಗಳನ್ನು ಆವರಿಸಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಲಂಡನ್​ನಲ್ಲಿ ಆರೋಪಿಸಿದ್ದಾರೆ. ಲಂಡನ್​ನ ಚಥಮ್ ಹೌಸ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ. ಭಾರತದಲ್ಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಸ್ವರೂಪ ಸಂಪೂರ್ಣವಾಗಿ ಬದಲಾಗಿದೆ ಮತ್ತು ಆರ್‌ಎಸ್‌ಎಸ್ ಎಂಬ ಒಂದು ಮೂಲಭೂತವಾದಿ, ಫ್ಯಾಸಿಸ್ಟ್ ಸಂಘಟನೆಯು ಮೂಲತಃ ಭಾರತದ ಎಲ್ಲ ಸಂಸ್ಥೆಗಳನ್ನು ವಶಪಡಿಸಿಕೊಂಡಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಭಾರತದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಸ್ಥಿತಿಯ ಬಗ್ಗೆ ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಮಾತನಾಡಿದರು. ಭಾರತದಲ್ಲಿ ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರಿಗೆ ಏನಾಗುತ್ತಿದೆ ಎಂಬುದನ್ನು ನೀವು ನೋಡಬಹುದು. ಇದನ್ನು ಕಾಂಗ್ರೆಸ್ ಹೇಳುತ್ತಿಲ್ಲ, ಭಾರತೀಯ ಪ್ರಜಾಪ್ರಭುತ್ವದಲ್ಲಿ ಗಂಭೀರ ಸಮಸ್ಯೆ ಇದೆ ಎಂದು ವಿದೇಶಿ ಪತ್ರಿಕೆಗಳಲ್ಲಿ ನಿರಂತರವಾಗಿ ಲೇಖನಗಳು ಬರುತ್ತಿವೆ ಎಂದು ರಾಹುಲ್ ಗಾಂಧಿ ಹೇಳಿದರು. ದೇಶದ ವಿವಿಧ ಸಂಸ್ಥೆಗಳು ಹೇಗೆ ಬೆದರಿಕೆ ಎದುರಿಸುತ್ತಿವೆ ಎಂಬುದನ್ನು ಕಾಂಗ್ರೆಸ್ ನಾಯಕ ಉಲ್ಲೇಖಿಸಿದ್ದಾರೆ.

ನಮ್ಮ ದೇಶದ ವಿವಿಧ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವಲ್ಲಿ ಅವರು ಎಷ್ಟು ಯಶಸ್ವಿಯಾಗಿದ್ದಾರೆ ಎಂಬುದು ನನಗೆ ಆಘಾತವನ್ನುಂಟು ಮಾಡಿದೆ. ಪತ್ರಿಕಾ ರಂಗ, ನ್ಯಾಯಾಂಗ, ಸಂಸತ್ತು ಮತ್ತು ಚುನಾವಣಾ ಆಯೋಗಗಳು ಬೆದರಿಕೆ ಎದುರಿಸುತ್ತಿವೆ ಮತ್ತು ಒಂದಲ್ಲ ಒಂದು ರೀತಿಯಲ್ಲಿ ನಿಯಂತ್ರಿಸಲ್ಪಡುತ್ತಿವೆ ಎಂದು ರಾಹುಲ್ ಗಾಂಧಿ ಹೇಳಿದರು. ತನಿಖಾ ಸಂಸ್ಥೆಗಳನ್ನು ಹೇಗೆ ಬಳಸಲಾಗುತ್ತಿದೆ ಎಂಬುದನ್ನು ನೀವು ಯಾವುದೇ ವಿರೋಧ ಪಕ್ಷದ ನಾಯಕನನ್ನು ಕೇಳಿ ತಿಳಿಯಬಹುದು. ನನ್ನ ಫೋನ್‌ನಲ್ಲಿ ಪೆಗಾಸಸ್ ಇತ್ತು. ನಾವು ಅಧಿಕಾರದಲ್ಲಿದ್ದಾಗ ಇಂಥದ್ದೆಲ್ಲ ಆಗಿರಲಿಲ್ಲ ಎಂದು ಅವರು ಹೇಳಿದರು.

ಕೇಂಬ್ರಿಡ್ಜ್​​​​ನಲ್ಲೂ ವಾಗ್ದಾಳಿ ನಡೆಸಿದ್ದರಾಹುಲ್​:ಕೇಂಬ್ರಿಡ್ಜ್​​ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದದಲ್ಲೂ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ನಡೆಸಲಾಗುತ್ತಿದೆ ಹಾಗೂ ತಮ್ಮ ಫೋನ್​ನಲ್ಲಿ ಇಸ್ರೇಲ್​ನ ಸ್ಪೈವೇರ್ ಪೆಗಾಸಸ್ ನುಸುಳಿಸಲಾಗಿದೆ ಎಂದು ರಾಹುಲ್ ಆರೋಪಿಸಿದ್ದರು. ತಮ್ಮ ಕರೆಗಳು ರೆಕಾರ್ಡ್ ಆಗುತ್ತಿರುವುದರಿಂದ ಫೋನ್‌ನಲ್ಲಿ ಮಾತನಾಡುವಾಗ ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ತನಗೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಹುಲ್ ಹೇಳಿದ್ದರು.

ನನ್ನ ಫೋನ್‌ನಲ್ಲಿಯೇ ಪೆಗಾಸಸ್ ಸ್ಪೈವೇರ್ ಇತ್ತು. ಬಹುತೇಕ ರಾಜಕಾರಣಿಗಳ ಫೋನ್‌ಗಳಲ್ಲಿ ಪೆಗಾಸಸ್ ಇತ್ತು. ಫೋನ್​ನಲ್ಲಿ ಮಾತನಾಡುವಾಗ ಜಾಗರೂಕರಾಗಿರಿ ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳೇ ನನಗೆ ಕರೆ ಮಾಡಿ ಹೇಳಿದ್ದರು. ಹೇಗೆ ನೋಡಿದರೂ ಕ್ರಿಮಿನಲ್ ಅಲ್ಲದ ವಿಷಯಗಳಲ್ಲಿ ನನ್ನ ಮೇಲೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದರು.

ರಾಹುಲ್ ಗಾಂಧಿಯವರು ತಮ್ಮ ಭಾಷಣಗಳಲ್ಲಿ ಭಾರತದ ಪ್ರಜಾಪ್ರಭುತ್ವ, ರಾಜಕೀಯ, ಸಂಸತ್ತು, ರಾಜಕೀಯ ವ್ಯವಸ್ಥೆ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಕೀಳಾಗಿ ತೋರಿಸಲು ಪ್ರಯತ್ನಿಸಿದ್ದಾರೆ ಎಂದು ಬಿಜೆಪಿ ತೀವ್ರ ಸಂಕಟದಿಂದ ಹೇಳಲು ಬಯಸುತ್ತದೆ ಎಂದು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ : ಲಂಡನ್​ನಲ್ಲಿ ಬಸವೇಶ್ವರರ ಪ್ರತಿಮೆಗೆ ರಾಹುಲ್​ ಗಾಂಧಿ ಮಾಲಾರ್ಪಣೆ: ಪ್ರಜಾಪ್ರಭುತ್ವದ ಹರಿಕಾರರು ಎಂದು ಬಣ್ಣನೆ

ABOUT THE AUTHOR

...view details