ಕರ್ನಾಟಕ

karnataka

ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿ ಗಣ್ಯರ ಕಂಬನಿ

By

Published : Sep 13, 2021, 5:33 PM IST

ಕಳೆದ ಹಲವು ದಿನಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಸದ ಆಸ್ಕರ್‌ ಫರ್ನಾಂಡಿಸ್‌ ಇಂದು ವಿಧಿವಶರಾಗಿದ್ದು, ಫರ್ನಾಂಡಿಸ್‌ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಪ್ರಧಾನಿ ಮೋದಿ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ..

Saddened by the demise of Rajya Sabha MP Shri Oscar Fernandes Ji. In this sad hour, my thoughts and prayers are with his family and well-wishers. May his soul rest in peace: PM
ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿ ಗಣ್ಯರ ಕಂಬನಿ

ನವದೆಹಲಿ :ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಹಾಲಿ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಹಿರಿಯ ಸಂಸದರಾದ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ ಎಂದು ತಿಳಿದು ದುಃಖವಾಯಿತು.

ಅವರು ನೆಲಕ್ಕೆ ಬೇರೂರಿದ್ದ ಹಾಗೂ ಜನರ ಕಲ್ಯಾಣಕ್ಕೆ ಬದ್ಧರಾಗಿರುವ ನಾಯಕರು. ಮೃತರ ಕುಟುಂಬಕ್ಕೆ, ಸ್ನೇಹಿತರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪವಿದೆ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಟ್ವೀಟ್‌ ಮಾಡಿದ್ದಾರೆ.

ಆಸ್ಕರ್‌ ಫರ್ನಾಂಡಿಸ್‌ ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬಸ್ಥರು ಹಾಗೂ ಹಿತೈಷಿಗಳೊಂದಿಗೆ ಸಂತಾಪವಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ಹೇಳಿರುವುದಾಗಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:5 ಬಾರಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ, ಕೃಷಿಯಲ್ಲೂ ಎತ್ತಿದ 'ಕೈ': ಇಲ್ಲಿದೆ ಆಸ್ಕರ್ ಫರ್ನಾಂಡಿಸ್ ಜೀವನ ಚಿತ್ರಣ

'ಫರ್ನಾಂಡಿಸ್‌ ನಿಧನ ವೈಯಕ್ತಿಕವಾಗಿ ನನಗೆ ನಷ್ಟ'

ಆಸ್ಕರ್ ಫರ್ನಾಂಡಿಸ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಫರ್ನಾಂಡಿಸ್‌ ಅವರ ನಿಧನ ನನಗೆ ವೈಯಕ್ತಿಕ ನಷ್ಟ. ಅವರು ಕಾಂಗ್ರೆಸ್ ಪಕ್ಷದಲ್ಲಿ ಅನೇಕರಿಗೆ ಮಾರ್ಗದರ್ಶಕರಾಗಿದ್ದರು. ಅವರ ಕೊಡುಗೆಗಳನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟಿಸಿದ್ದಾರೆ.

ಇದನ್ನೂ ಓದಿ: ಗದ್ಗದಿತರಾದ ಕೈ ನಾಯಕಿ: ಆಸ್ಕರ್ ಫರ್ನಾಂಡಿಸ್ ಪತ್ನಿಗೆ ಸೋನಿಯಾ ಗಾಂಧಿ ಸಾಂತ್ವನ

ABOUT THE AUTHOR

...view details