ಶ್ರೀನಗರ(ಜಮ್ಮು ಕಾಶ್ಮೀರ): ಭಯೋತ್ಪಾದಕರ ಹಾವಳಿಯ ಹೊರತಾಗಿ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಸಮಸ್ಯೆ ಕಾಣಿಸಿಕೊಂಡಿದೆ. ಕೋವಿಡ್ನಿಂದ ಅನಾಥರಾದ ಮಕ್ಕಳನ್ನು ಕಾನೂನುಬಾಹಿರವಾಗಿ ದತ್ತು ನೀಡುವಿಕೆ ಮತ್ತು ಮಾರಾಟ ಮಾಡುತ್ತಿರುವ ಆರೋಪ ಇದಾಗಿದೆ.
ಕೋವಿಡ್ನಿಂದ ತಂದೆ, ತಾಯಿಯನ್ನು ಕಳೆದುಕೊಂಡು ಸಾಕಷ್ಟು ಮಕ್ಕಳು ಅನಾಥರಾಗಿದ್ದಾರೆ. ಅಂಥವರನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸರ್ಕಾರೇತರ ಸಂಘಟನೆಯೊಂದರ ದಂಧೆಯ ಕುರಿತು ಆನ್ಲೈನ್ ಸುದ್ದಿ ಮಾಧ್ಯಮವೊಂದು ವರದಿ ಮಾಡಿತ್ತು.
ಈ ವರದಿ ಆಧರಿಸಿ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ನಿರ್ದೇಶಕಿ ಶಬ್ನಮ್ ಕಾಮಿಲಿ, ಸರ್ಕಾರೇತರ ಸಂಘಟನೆಯ ಇಬ್ಬರ ವಿರುದ್ಧ ದೂರು ದಾಖಲಿಸಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದ್ದಾರೆ. ಪಾಂಪೋರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.