ಹೈದರಾಬಾದ್ :ಬಾಲಿವುಡ್ ನಟ ಸಲ್ಮಾನ್ ಖಾನ್ ಈಗಾಗಲೇ ಕೆಲವು ಪ್ರಕರಣಗಳಲ್ಲಿ ಹಲವು ಬಾರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದೀಗ ಫೋನ್ ಕಿತ್ತುಕೊಂಡ ಪ್ರಕರಣದಲ್ಲಿ ಸಲ್ಲು ಮತ್ತೇ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದೂರುದಾರ ಅಶೋಕ್ ಶ್ಯಾಮಲಾಲ್ ಪಾಂಡೆ ಅವರು ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕರ ವಿರುದ್ಧ ಐಪಿಸಿಯ ಸೆಕ್ಷನ್ 324, 392, 426, 506 (II), R/W34 ಅಡಿಯಲ್ಲಿ ದೂರು ದಾಖಲಿಸಿದ್ದರು.
ಪತ್ರಕರ್ತರೊಬ್ಬರ ಫೋನ್ ಕಿತ್ತುಕೊಂಡು ಆತನೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಸಲ್ಮಾನ್ ಮತ್ತು ಆತನ ಅಂಗರಕ್ಷಕನ ವಿರುದ್ಧ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರಿಗೆ ಹೊಸದಾಗಿ ಸಮನ್ಸ್ ಜಾರಿ ಮಾಡಿತ್ತು. ಇದೀಗ ಈ ವಿಚಾರವಾಗಿ ನಟ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 2019ರಿಂದ ಈ ಪ್ರಕರಣ ನ್ಯಾಯಾಲಯದಲ್ಲಿದ್ದು, ಏ. 5ಕ್ಕೆ ಸಮನ್ಸ್ ಜಾರಿಯಾಗಿತ್ತು.