ಕರ್ನಾಟಕ

karnataka

ನಂದಿಗ್ರಾಮದಲ್ಲಿ ದೀದಿ ಮೇಲೆ ಹಲ್ಲೆ ಆರೋಪ: ತನಿಖಾ ಸಂಸ್ಥೆಯಿಂದ ತನಿಖೆಗೆ ಸುಪ್ರೀಂ ನಿರಾಕರಣೆ

By

Published : Apr 9, 2021, 6:45 PM IST

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ಆರೋಪ ಸಂಬಂಧ ತನಿಖೆಯನ್ನು ಕೇಂದ್ರದ ಸ್ವತಂತ್ರ ತನಿಖಾ ಸಂಸ್ಥೆಗೆ ಸೂಚಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.

SC
ಸುಪ್ರೀಂಕೋರ್ಟ್

ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ಆರೋಪ ಸಂಬಂಧ ಸಿಬಿಐನಂತಹ ಸ್ವತಂತ್ರ ತನಿಖಾ ಸಂಸ್ಥೆ ತನಿಖೆ ನಡೆಸಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ವಿಧಾನಸಭೆ ಚುನಾವಣೆ ಹಿನ್ನೆಲೆ ಮಾರ್ಚ್​ 10ರಂದು ತಾವು ಸ್ಪರ್ಧಿಸುತ್ತಿರುವ ನಂದಿಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ಅಪರಿಚಿತ ಜನರಿಂದ ತಳ್ಳಲ್ಪಟ್ಟು ಮಮತಾ ಬ್ಯಾನರ್ಜಿ ಅವರು ಗಾಯಗೊಂಡಿದ್ದರು. ದೀದಿಯ ಎಡಗಾಲಿಗೆ ಮತ್ತು ಸೊಂಟಕ್ಕೆ ಗಾಯಗಳಾಗಿದ್ದು, ಯಾರೋ ಬೇಕೆಂತಲೇ ಕೃತ್ಯ ಎಸಗಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಆರೋಪಿಸಿತ್ತು.

ಇದನ್ನೂ ಓದಿ: ಏ.​23ರ ವರೆಗೆ ಸಚಿನ್​ ವಾಜೆ ನ್ಯಾಯಾಂಗ ಬಂಧನಕ್ಕೆ

ಈ ಬಗ್ಗೆ ತನಿಖೆ ನಡೆಸಲು ಕೇಂದ್ರದ ಸ್ವತಂತ್ರ ತನಿಖಾ ಸಂಸ್ಥೆಗೆ ಸೂಚಿಸಬೇಕೆಂದು ಕೋರಿ ಸುಪ್ರೀಂಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ನಡೆಸಿತು. ನಿಮ್ಮ ಅರ್ಜಿಯನ್ನು ಹಿಂಪಡೆದು, ಕೋಲ್ಕತ್ತಾ ಹೈಕೋರ್ಟ್ ಸಂಪರ್ಕಿಸಲು ಅರ್ಜಿದಾರರ ಪರ ಹಾಜರಾದ ವಕೀಲರಿಗೆ ತಿಳಿಸಿತು.

ABOUT THE AUTHOR

...view details