ಕರ್ನಾಟಕ

karnataka

ETV Bharat / bharat

ಆಧಾರ್‌ ಲಿಂಕ್​ ಇಲ್ಲದ 3 ಕೋಟಿ ಪಡಿತರ ಚೀಟಿ ರದ್ದು: ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ನೋಟಿಸ್ - SC on cancellation of 3 crore ration card

ಮೂರು ಕೋಟಿ ಆಧಾರ್‌ ಕಾರ್ಡ್‌ಗಳನ್ನು ರದ್ದುಪಡಿಸುವುದು ಮತ್ತು ಜನರು ಹಸಿವಿನಿಂದ ಸಾವನ್ನಪ್ಪುವುದು ಇಲ್ಲಿ ಪ್ರಮುಖ ವಿಷಯವಾಗಿದೆ ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಸರ್ವೋಚ್ಛ ನ್ಯಾಯಾಲಯಕ್ಕೆ ತಿಳಿಸಿದರು.

SC seek centre's response over cancellation of 3 crore ration card
ಕೇಂದ್ರಕ್ಕೆ ಸುಪ್ರೀಂ ನೋಟಿಸ್

By

Published : Mar 17, 2021, 3:55 PM IST

ನವದೆಹಲಿ:ಆಧಾರ್‌ ಕಾರ್ಡ್​ ಜತೆ ಲಿಂಕ್​ ಇಲ್ಲದಿರುವ 3 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸುವ ವಿರುದ್ಧ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಸಿಜೆಐ ಎಸ್‌.ಎ.ಬೊಬ್ಡೆ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು, ಈ ವಿಷಯವು ತುಂಬಾ ಗಂಭೀರವಾಗಿದೆ. ಇದು ಆಧಾರ್ ಒಳಗೊಂಡಿರುವುದರಿಂದ ಕೇಂದ್ರದ ಪ್ರತಿಕ್ರಿಯೆ ಕೇಳಲು ಬಯಸುತ್ತೇವೆ ಎಂದಿದೆ.

ಇದನ್ನೂ ಓದಿ:ಟೆಸ್ಟಿಂಗ್‌ ಹೆಚ್ಚಿಸಿ, ಜನರು ಆತಂಕಗೊಳ್ಳದಂತೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂಗಳಿಗೆ ಮೋದಿ ಮಹತ್ವದ ಸೂಚನೆ

ಮೂರು ಕೋಟಿ ಕಾರ್ಡ್‌ಗಳನ್ನು ರದ್ದುಪಡಿಸುವುದು ಮತ್ತು ಹಸಿವಿನಿಂದ ಸಾವನ್ನಪ್ಪುವುದು ಇಲ್ಲಿ ಪ್ರಮುಖ ವಿಷಯವಾಗಿದೆ ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ತಿಳಿಸಿದರು.

ಈ ವಿಷಯದ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸಲು ಸಿಜೆಐ ಕೇಂದ್ರಕ್ಕೆ ಸೂಚಿಸಿದ್ದಾರೆ.

For All Latest Updates

ABOUT THE AUTHOR

...view details