ಕರ್ನಾಟಕ

karnataka

ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ.. ಇಂದು ಮುಂದುವರೆಯುವ ಸಾಧ್ಯತೆ: ಶಾಲೆಗಳಿಗೆ ರಜೆ ಘೋಷಣೆ

By

Published : Jun 19, 2023, 11:53 AM IST

Updated : Jun 19, 2023, 12:12 PM IST

ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Representative image
ಪ್ರಾತಿನಿಧಿಕ ಚಿತ್ರ

ಚೆನ್ನೈ (ತಮಿಳುನಾಡು):ರಾಜಧಾನಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ನಿನ್ನೆ(ಭಾನುವಾರ ) ರಾತ್ರಿ ಭಾರಿ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಚೆನ್ನೈನಲ್ಲಿ ಸುಮಾರು 137 ಮಿಮೀಟರ್ ಮಳೆಯಾಗಿದೆ.​​ ಇಂದು(ಸೋಮವಾರ) ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಆಯಾ ಜಿಲ್ಲಾಡಳಿತಗಳು ತಿಳಿಸಿವೆ. ಇಲ್ಲಿಯವರೆಗೆ ರಾಣಿಪೇಟ್, ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್‌ಪೇಟ್ ಮತ್ತು ವೆಲ್ಲೂರ್ ಎಂಬ ಆರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮುಂದಿನ 3 ಗಂಟೆಗಳ ಕಾಲ ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಮಾಪನಶಾಸ್ತ್ರ ಇಲಾಖೆ, ಚೆನ್ನೈ ತಿಳಿಸಿದೆ. ಈ ಮಧ್ಯೆ ದೆಹಲಿಯ ಕೆಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಸ್ವಲ್ಪ ಮಳೆ ಸುರಿದಿದೆ. ಸೋಮವಾರ ದೆಹಲಿಯಲ್ಲಿ ಅತಿ ಹಗುರವಾದ ಮಳೆ ಮತ್ತು ತುಂತುರು ಮಳೆಯಾಗುವ ಸಾಧ್ಯತೆಯೊಂದಿಗೆ ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಏರಿಕೆ: ನಿರಂತರ ಮಳೆಯ ನಂತರ ಅಸ್ಸೋಂ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ಅಸ್ಸಾಂನ ಲಖಿಂಪುರದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಸತತ ಮಳೆಯಿಂದ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದ್ದು ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ. ಎಲ್ಲಾ ಜಿಲ್ಲೆಗಳಿಗೆ ಎಚ್ಚರಿಕೆ ವಹಿಸಲು ಸೂಚಿಸಿದೆ.

ಇದನ್ನೂ ಓದಿ:Effect of cyclone: ಮುಂಬೈ, ಗುಜರಾತ್ ಕರಾವಳಿಯಲ್ಲಿ 'ಬಿಪೊರ್‌ಜಾಯ್‌' ಆರ್ಭಟ: ಭೋರ್ಗರೆದ ಬೃಹತ್‌ ಅಲೆಗಳು

ರಾಜ್ಯ ಸರ್ಕಾರ ಕೈಗೊಂಡಿರುವ ಪ್ರವಾಹದ ಸಿದ್ಧತೆ ಕುರಿತು ಮಾತನಾಡಿದ ಅಸ್ಸೋಂ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್‌ಡಿಎಂಎ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜ್ಞಾನೇಂದ್ರ ದೇವ್ ತ್ರಿಪಾಠಿ "ತುರ್ತು ಪರಿಸ್ಥಿತಿ ನಿಭಾಯಿಸಲು ಅಸ್ಸೋಂ ಸರ್ಕಾರ ಭಾರತೀಯ ಸೇನೆ, ಭಾರತೀಯ ವಾಯುಪಡೆ (IAF), ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ​ (NDRF) ಸೇರಿದಂತೆ ಎಲ್ಲಾ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ" ಎಂದು ತಿಳಿಸಿದರು.

ಇನ್ನು ಹಿಮಾಚಲಪ್ರದೇಶದ ಕಾಕೇರಿ ಲೇಕ್​ನಲ್ಲಿ ಸಿಲುಕಿಕೊಂಡಿದ್ದ 26 ಪ್ರವಾಸಿಗರನ್ನು ಎಸ್​ಡಿಆರ್​ಎಫ್​ ತಂಡ ಕಾಪಾಡಿದೆ. ಕಾಂಗ್ರಾದಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಪೂರ್ವ ರಾಜಸ್ಥಾನದ ಮಧ್ಯ ಭಾಗಗಳಲ್ಲಿ ತಗ್ಗು ಪ್ರದೇಶವನ್ನು ಸೃಷ್ಟಿಸಿದ ಬಿಪರ್​​​ಜೊಯ್​​ ಚಂಡಮಾರುತದ ಪೂರ್ವ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಮುಂದಿನ 12 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಭಾನುವಾರ ಮುಂಜಾನೆ ಬಿಪರ್​​ಜೊಯ್​​ ಚಂಡಮಾರುತದ ಪ್ರಭಾವದಿಂದ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ. ವಿವಿಧ ಸ್ಥಳಗಳು ಜಲಾವೃತಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಕಂಡು ಬಂದಿದೆ.

ಇದನ್ನೂ ಓದಿ:ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ, 28 ಮಂದಿ ನಾಪತ್ತೆ

Last Updated : Jun 19, 2023, 12:12 PM IST

ABOUT THE AUTHOR

...view details