ಬಸ್ತಾರ್ (ಛತ್ತೀಸ್ಗಢ): ಗಣಿಗಾರಿಕೆ ವೇಳೆ ಅವಶೇಷಗಳಡಿ ಸಿಲುಕಿ ಏಳು ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಬಸ್ತಾರ್ನ ಮಲ್ಗಾಂವ್ ಪ್ರದೇಶದಲ್ಲಿ ನಡೆದಿದ್ದು, ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಗಣಿಯಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಗಣಿ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ. ಮೃತರಲ್ಲಿ ಆರು ಜನ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದ್ದಾರೆ. ಮೃತರೆಲ್ಲರೂ ಸ್ಥಳೀಯ ಗ್ರಾಮಸ್ಥರಾಗಿದ್ದು, ಗಣಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.