ಮುಜಾಫರ್ನಗರ: ರಾಜ್ಯಸಭಾ ಸಂಸದ ಸಂಜಯ್ ರಾವತ್ ಮತ್ತು ಬಿಕೆಯು ವಕ್ತಾರ ರಾಕೇಶ್ ಟಿಕಾಯತ್ ಮುಜಾಫರ್ನಗರದಲ್ಲಿ ಭೇಟಿಯಾಗಿದ್ದಾರೆ. ಮಧ್ಯಾಹ್ನ ಟಿಕಾಯತ್ ಅವರ ನಿವಾಸದಲ್ಲಿ ಉಭಯ ನಾಯಕರ ನಡುವೆ ಮಾತುಕತೆ ನಡೆಯಿತು.
ಸಂಜಯ್ ರಾವತ್ ಅವರು ರಾಕೇಶ್ ಟಿಕಾಯತ್ ಅವರೊಂದಿಗೆ ಚುನಾವಣಾ ವಿಷಯದ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾವತ್, ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟಿಕಾಯತ್ ಅವರು ಸುದೀರ್ಘ ಹೋರಾಟ ನಡೆಸಿದ ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.