ಕರ್ನಾಟಕ

karnataka

By

Published : Aug 15, 2023, 12:10 PM IST

ETV Bharat / bharat

Shootout: ನಾಡಿಯಾದಲ್ಲಿ ಶೂಟೌಟ್‌.. ಮಹಿಳೆಯರು, ಮಕ್ಕಳು ಸೇರಿ 15 ಮಂದಿಗೆ ಗಾಯ

Shootout in Bengal: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನಕಾಶಿಪಾರಾದಲ್ಲಿ ಶೂಟೌಟ್‌ ನಡೆದಿದೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಪೊಲೀಸ್ ಮೂಲಗಳು ತಿಳಿಸಿವೆ.

Representative
ಪ್ರಾತಿನಿಧಿಕ ಚಿತ್ರ

ಕೋಲ್ಕತ್ತಾ:ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನಕಾಶಿಪಾರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಗಾಯಾಳುಗಳು ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಕಾಂಗ್ರೆಸ್‌ಗೆ ರಾಜಕೀಯ ಸಂಬಂಧ ಹೊಂದಿರುವ ಎರಡು ಕುಟುಂಬಗಳಿಗೆ ಸೇರಿದವರು ಎಂದು ವರದಿಯಾಗಿದೆ.

ಐವರ ಸ್ಥಿತಿ ಚಿಂತಾಜನಕ:ಗಾಯಗೊಂಡ 15 ಮಂದಿಯಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. 'ಈ ಗುಂಡಿನ ಚಕಮಕಿ ಮೂರು ಹಂತದ ಪಂಚಾಯತ್ ವ್ಯವಸ್ಥೆಗೆ ಇತ್ತೀಚೆಗೆ ಮುಕ್ತಾಯವಾದ ಚುನಾವಣೆ ವೇಳೆ ಈ ಪ್ರದೇಶದಲ್ಲಿ ಕಾಣಿಸಿಕೊಂಡ ರಾಜಕೀಯ ಹಿಂಸಾಚಾರದ ಮುಂದುವರಿಕೆಯಾಗಿದೆ' ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಮೂರು ಸ್ಥರಗಳ ಪಂಚಾಯ್ತಿ ಚುನಾವಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಸ್ಥಳೀಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ರಾಯ್ ಹೇಳಿದ್ದಾರೆ. ಪೊಲೀಸ್ ತುಕಡಿಯನ್ನು ಅಲ್ಲಿಗೆ ನಿಯೋಜಿಸಲಾಗಿದೆ. ಪ್ರಕರಣ ತನಿಖಾ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:TMC leader arrested.. ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಪಿಸ್ತೂಲ್ ಇಟ್ಟುಕೊಂಡು ಬಂದಿದ್ದ ಟಿಎಂಸಿ ನಾಯಕ ಅರೆಸ್ಟ್​

ನಾಡಿಯಾದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ನಾಡಿಯಾ ಅಸೀಮ್ ಸಹಾ ಅವರು ತಮ್ಮ ಮನೆಗಳ ಮೇಲೆ ದಾಳಿ ಮಾಡಿದವರು ಇತ್ತೀಚಿನವರೆಗೂ ತೃಣಮೂಲ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದರು ಎಂದು ಅವರು ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಗೆ ಮೊದಲು ಕಾಂಗ್ರೆಸ್‌ಗೆ ಸೇರ್ಪಪಡೆಗೊಂಡರು ಎಂದು ಆರೋಪಿಸಿದರು. ಈ ಸೇರ್ಪಡೆ ಆಡಳಿತ ಪಕ್ಷದ ನಾಯಕತ್ವದ ನಡುವೆ ದ್ವೇಷ ಸೃಷ್ಟಿಸಿತು. ಅದರ ಪರಿಣಾಮವೇ ಸೋಮವಾರ ತಡರಾತ್ರಿ ನಡೆದ ಶೂಟೌಟ್.

ಗೂಂಡಾಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 15 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಂತೆ ವರ್ತಿಸಿದರು. ಶೂಟೌಟ್ ಮುಗಿದ ನಂತರ ಅವರು ಘಟನಾ ಸ್ಥಳಕ್ಕೆ ಆಗಮಿಸಿದರು. ಅಷ್ಟರಲ್ಲಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸಹಾ ಆರೋಪಿಸಿದ್ದಾರೆ.

ಆರೋಪ ನಿರಾಕರಿಸಿದ ನಾಡಿಯಾ ಜಿಲ್ಲಾಧ್ಯಕ್ಷ:ಮತ್ತೊಂದೆಡೆ, ಘಟನೆಯ ಹಿಂದೆ ತಮ್ಮ ಪಕ್ಷದ ಬೆಂಬಲಿಗರ ಕೈವಾಡವನ್ನು ತೃಣಮೂಲ ಕಾಂಗ್ರೆಸ್‌ನ ನಾಡಿಯಾ ಜಿಲ್ಲಾಧ್ಯಕ್ಷ ನಸೀರುದ್ದೀನ್ ಅಹ್ಮದ್ ನಿರಾಕರಿಸಿದ್ದಾರೆ. ಇದು ಸ್ಥಳೀಯ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವಿನ ಘರ್ಷಣೆಯಾಗಿದೆ. ನಾವು ಈ ವಿಷಯದಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: TMC ಕಾರ್ಯಕರ್ತನ ಹತ್ಯೆ, ಕಾಂಗ್ರೆಸ್‌ ಮುಖಂಡನಿಗೆ ಗುಂಡು

ABOUT THE AUTHOR

...view details