ನವ ದೆಹಲಿ:ಶ್ರದ್ಧಾ ವಾಲ್ಕರ್ ಭೀಕರ ಹತ್ಯೆ ಆರೋಪಿ ಅಫ್ತಾಬ್ ಪೂನಾವಾಲಾಗೆ ದೆಹಲಿಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸುಳ್ಳು ಪತ್ತೆ ಪರೀಕ್ಷೆ ಬಳಿಕ ಕಸ್ಟಡಿಗೆ ಕರೆದೊಯ್ಯುತ್ತಿದ್ದ ವಾಹನದ ಮೇಲೆ ಇಬ್ಬರು ವ್ಯಕ್ತಿಗಳು ಕತ್ತಿಗಳಿಂದ ದಾಳಿ ಮಾಡಿದ ಘಟನೆ ನಡೆದಿದೆ. ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರದ್ಧಾಳನ್ನು 35 ತುಂಡುಗಳನ್ನಾಗಿ ಮಾಡಿ ಶೀತಪೆಟ್ಟಿಗೆಯಲ್ಲಿಟ್ಟ ಕೇಸ್ಗೆ ಸಂಬಂಧಿಸಿದಂತೆ ಹಂತಕ ಅಫ್ತಾಬ್ ತನ್ನ ಹೇಳಿಕೆಗಳನ್ನು ಬದಲಿಸುತ್ತಿದ್ದು, ಸುಳ್ಳು ಪತ್ತೆಗಾಗಿ ಪರೀಕ್ಷೆ (ಪಾಲಿಗ್ರಾಫ್) ನಡೆಸಲಾಗುತ್ತಿದೆ. ಇಂದು ಕೂಡ ಹಂತಕನಿಗೆ ದೆಹಲಿಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿ ವಾಪಸ್ ಕರೆದೊಯ್ಯುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಏಕಾಏಕಿ ಪೊಲೀಸ್ ವ್ಯಾನ್ ಮೇಲೆ ದಾಳಿ ಮಾಡಿದ್ದಾರೆ.