ಕರ್ನಾಟಕ

karnataka

ETV Bharat / bharat

'ಇಸ್ಲಾಂಗೆ ಮತಾಂತರ ಆಗದಿದ್ದರೆ ವಿಡಿಯೋ ವೈರಲ್ ಮಾಡುವೆ': ಸಿಖ್​ ಮಹಿಳೆಗೆ ಬೆದರಿಕೆ, ದೂರು ದಾಖಲು

ನವದೆಹಲಿಯಲ್ಲಿ ಲವ್ ಜಿಹಾದ್ ಪ್ರಕರಣವೆಂದು ಆರೋಪಿಸಿ ದಾಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

By

Published : May 7, 2023, 2:14 PM IST

video viral
ವೀಡಿಯೊ ವೈರಲ್

ನವದೆಹಲಿ:ನಗರದಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜ್ಮತ್ ಅಲಿ ಖಾನ್ ಎಂಬಾತ ವಿಧವೆಯಾಗಿದ್ದ ಸಿಖ್ ಮಹಿಳೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗದಿದ್ದರೆ ತನ್ನಲ್ಲಿರುವ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂತ್ರಸ್ತೆ ಮತಾಂತರಕ್ಕೆ ನಿರಾಕರಿಸಿದ್ದಕ್ಕೆ ಆರೋಪಿ ಆ್ಯಸಿಡ್ ಎರಚಿ ಸಾಯಿಸುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಪೊಲೀಸರು ಅತ್ಯಾಚಾರ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, 2016 ರಲ್ಲಿ ಸಂತ್ರಸ್ತೆಗೆ ಲಕ್ಷ್ಮಿ ನಗರದ ನಿವಾಸಿ ಅಜ್ಮತ್ ಅಲಿ ಖಾನ್ ಫೇಸ್‌ಬುಕ್‌ ಮೂಲಕ ಪರಿಚಯವಾಗಿದ್ದು, ಇಬ್ಬರು ಸ್ನೇಹಿತರಾಗಿದ್ದರು. ಸ್ನೇಹವು ಆಳವಾಗಿ ಬೆಳೆದು 2017 ರ ಹೊತ್ತಿಗೆ ಸಂಬಂಧದಲ್ಲಿದ್ದರು. ಇಬ್ಬರು ಅನ್ಯೋನ್ಯವಾಗಿದ್ದ ಸಂದರ್ಭದಲ್ಲಿ ಖಾನ್ ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಪದೇ ಪದೆ ಖಾನ್ ನನಗೆ ಮುಸ್ಲಿಂ ಧರ್ಮ ಅಳವಡಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದಾನೆ. ಅದನ್ನು ನಿರಾಕರಿಸಿದ್ದೆ. ನಾನು ಸಿಖ್ ಹುಡುಗಿ. ಮದುವೆಯ ನಂತರವೂ ಸಿಖ್ ಆಗಿಯೇ ಉಳಿಯಲು ಬಯಸುತ್ತೇನೆ ಎಂದು ಹೇಳಿದ್ದೆ. ಆದರೆ ಅತ ನನ್ನನ್ನು ಒತ್ತಾಯಿಸಿ, ಇಸ್ಲಾಂ ಧರ್ಮವನ್ನು ಸ್ವೀಕರಿಸಬೇಕು, ಬುರ್ಖಾ ಧರಿಸಬೇಕು, ದಿನಕ್ಕೆ ಐದು ಬಾರಿ ನಮಾಜ್ ಮಾಡಬೇಕು ಮತ್ತು ರೋಜಾ ಇಟ್ಟುಕೊಳ್ಳಬೇಕು ಎಂದೆಲ್ಲ ಒತ್ತಡ ಹೇರುತ್ತಿದ್ದ.

ನಾನು ನನ್ನ ಸಿಖ್​ ಧರ್ಮವನ್ನು ಬದಲಾಯಿಸಲು ನಿರಾಕರಿಸಿದೆ. ಇಸ್ಲಾಂ ಮತಾಂತರದಿಂದ ತಪ್ಪಿಸಿಕೊಳ್ಳಲು ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದೆ. ಆತನಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿ, 2018ರ ಬಳಿಕ ಭೇಟಿಯಾಗಲಿಲ್ಲ. ಆರೋಪಿ ನನಗೆ ಸಂದೇಶ ಕಳುಹಿಸುತ್ತಲೇ ಇದ್ದ ಎಂದು ಮಹಿಳೆ ತಿಳಿಸಿದ್ದಾರೆ.

2019 ರಲ್ಲಿ ಆರೋಪಿ ನನ್ನ ಎಲ್ಲ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಹಾಗೂ ಇಡೀ ಜೀವನವನ್ನೇ ನಾಶ ಮಾಡುವುದಾಗಿ ಬೆದರಿಕೆ ಹಾಕಿದ್ದ. ಏಪ್ರಿಲ್ 2 ರಂದು ಜನಕಪುರಿ ಪೊಲೀಸ್ ಠಾಣೆಯಲ್ಲಿಯೇ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಸಂತ್ರಸ್ತೆ ವಿವರಿಸಿದ್ದಾರೆ.

ನನ್ನ ಮುಖದ ಮೇಲೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದಾನೆ. ನಾನು ಆತನನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರೆ ನನ್ನನ್ನು ಜೀವಂತ ಸಮಾಧಿ ಮಾಡುವುದಾಗಿಯೂ ಹೇಳಿದ್ದಾನೆ ಎಂದು ನೀಡಿದ ದೂರು ಸ್ವೀಕರಿಸಿದ ಪೊಲೀಸರು ದಾಬ್ರಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರಿಗೆ ಯಾರೂ ಬಂಧನವಾಗಿಲ್ಲ. ಆರೋಪಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.

ಇದನ್ನೂ ಓದಿ:ಭಾರತದ ಮೇಲೆ 10 ನಿಮಿಷ ಹಾರಾಡಿತ್ತಾ ಪಾಕಿಸ್ತಾನ ವಿಮಾನ?

ABOUT THE AUTHOR

...view details