ಚೆನ್ನೈ (ತಮಿಳುನಾಡು): ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಂ.ಕೆ.ಸ್ಟಾಲಿನ್ ಅವರು ಫೋರ್ಟ್ ಸೇಂಟ್ ಜಾರ್ಜ್ನ ಸಚಿವಾಲಯದಲ್ಲಿರುವ ತಮ್ಮ ಕಚೇರಿಯಿಂದ ಐದು ನಿರ್ಣಾಯಕ ಕಡತಗಳಿಗೆ ಸಹಿ ಹಾಕಿದರು. ಈ ಮೂಲಕ ಸಿಎಂ ಆಗಿ ಪದಗ್ರಹಣ ಮಾಡಿದ ದಿನದಂದೇ ತಮಿಳುನಾಡಿನ ಜನತೆಯ ಖುಷಿ ಹೆಚ್ಚಿಸಿದ್ದಾರೆ.
ಕೊರೊನಾ ಚಿಕಿತ್ಸೆಯನ್ನು ಮುಖ್ಯಮಂತ್ರಿಗಳ ಆರೋಗ್ಯ ವಿಮಾ ಯೋಜನೆಯಡಿ ನೀಡುವುದು, ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆಯಡಿ ಎಲ್ಲಾ ಚಿಕಿತ್ಸಾ ವೆಚ್ಚಗಳನ್ನು ಸರ್ಕಾರವು ಮರುಪಾವತಿ ಮಾಡುವುದು, ರಾಜ್ಯಾದ್ಯಂತ ಮಹಿಳೆಯರಿಗೆ ಸರ್ಕಾರಿ ಸಿಟಿ ಬಸ್ಗಳಲ್ಲಿ (ಸಾಮಾನ್ಯ ಸೇವೆ) ಉಚಿತ ಪ್ರಯಾಣವನ್ನು ಘೋಷಿಸಿದ್ದಾರೆ.