ಕರ್ನಾಟಕ

karnataka

By

Published : Nov 1, 2022, 4:32 PM IST

Updated : Nov 1, 2022, 8:03 PM IST

ETV Bharat / bharat

ಮುನುಗೋಡು ಉಪಚುನಾವಣೆ: ಟಿಆರ್‌ಎಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ತೆಲಂಗಾಣದ ಪಲಿವೇಲದಲ್ಲಿ ಬಿಜೆಪಿ ಮತ್ತು ಟಿಆರ್‌ಎಸ್ ಕಾರ್ಯಕರ್ತರು ಪರಸ್ಪರ ಕಲ್ಲು, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.

ಮುನುಗೋಡಿನಲ್ಲಿ ಟಿಆರ್‌ಎಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ
ಮುನುಗೋಡಿನಲ್ಲಿ ಟಿಆರ್‌ಎಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಮುನುಗೋಡು(ತೆಲಂಗಾಣ) : ತೆಲಂಗಾಣದ ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಎರಡೇ ದಿನಗಳ ಬಾಕಿಯಿದೆ. ಈ ನಡುವೆ ಬಿಜೆಪಿ ಮತ್ತು ಟಿಆರ್‌ಎಸ್ ಕಾರ್ಯಕರ್ತರು ಪರಸ್ಪರ ಕಲ್ಲು, ದೊಣ್ಣೆಗಳಿಂದ ಹಲ್ಲೆ ನಡೆಸಿ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಇದರಿಂದ ಇಲ್ಲಿನ ಪಲಿವೇಲದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪಲಿವೇಲದಲ್ಲಿ ಬಿಜೆಪಿ ಒಂದೆಡೆ, ಟಿಆರ್‌ಎಸ್‌ ಮತ್ತೊಂದೆಡೆ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ದಾಳಿ - ಪ್ರತಿದಾಳಿ ಮಾಡಿಕೊಂಡಿದ್ದಾರೆ. ಬಿಜೆಪಿ ಪ್ರಚಾರ ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ ಈಟೆಲ ರಾಜೇಂದರ್ ಅವರ ಬೆಂಗಾವಲು ವಾಹನದ ಮೇಲೂ ಕಲ್ಲು ತೂರಾಟ ನಡೆದಿದೆ.

ಗಲಾಟೆಯಿಂದಾಗಿ ಕಾರಿನ ಗಾಜು ಪುಡಿಯಾಗಿರುವುದು

ಪೊಲೀಸರು ಮಧ್ಯ ಪ್ರವೇಶಿಸಿ ಎರಡೂ ಗುಂಪುಗಳನ್ನು ಚದುರಿಸಿದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಓದಿ:ಮಹಾರಾಷ್ಟ್ರದ ಸ್ಟೀಲ್​ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ

Last Updated : Nov 1, 2022, 8:03 PM IST

ABOUT THE AUTHOR

...view details