ಮುನುಗೋಡು(ತೆಲಂಗಾಣ) : ತೆಲಂಗಾಣದ ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಎರಡೇ ದಿನಗಳ ಬಾಕಿಯಿದೆ. ಈ ನಡುವೆ ಬಿಜೆಪಿ ಮತ್ತು ಟಿಆರ್ಎಸ್ ಕಾರ್ಯಕರ್ತರು ಪರಸ್ಪರ ಕಲ್ಲು, ದೊಣ್ಣೆಗಳಿಂದ ಹಲ್ಲೆ ನಡೆಸಿ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಇದರಿಂದ ಇಲ್ಲಿನ ಪಲಿವೇಲದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪಲಿವೇಲದಲ್ಲಿ ಬಿಜೆಪಿ ಒಂದೆಡೆ, ಟಿಆರ್ಎಸ್ ಮತ್ತೊಂದೆಡೆ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ದಾಳಿ - ಪ್ರತಿದಾಳಿ ಮಾಡಿಕೊಂಡಿದ್ದಾರೆ. ಬಿಜೆಪಿ ಪ್ರಚಾರ ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ ಈಟೆಲ ರಾಜೇಂದರ್ ಅವರ ಬೆಂಗಾವಲು ವಾಹನದ ಮೇಲೂ ಕಲ್ಲು ತೂರಾಟ ನಡೆದಿದೆ.