ನವದೆಹಲಿ: ವಾರಾಣಾಸಿಯ ಜ್ಞಾನವಾಪಿ ಮಸೀದಿಯಲ್ಲಿನ ಶಿವಲಿಂಗ ರಕ್ಷಣೆ ಮಾಡಲು ಕೋರಿ ಹಿಂದೂಗಳು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ಆಲಿಸಲು ಶುಕ್ರವಾರ ಪೀಠ ರಚಿಸಲಿದೆ. ಶಿವಲಿಂಗ ರಕ್ಷಣೆ ಕೋರಿ ಹಿಂದೂಗಳು ಸಲ್ಲಿಸಿದ್ದ ಮನವಿಯನ್ನು ನ್ಯಾ.ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಈ ಹಿಂದೆ ಆಲಿಸಿತ್ತು. ಶಿವಲಿಂಗ ರಕ್ಷಣೆ ಆದೇಶವೂ ನವೆಂಬರ್ 12ರಂದು ಕೊನೆಗೊಳ್ಳಲಿದೆ ಎಂದು ವಕೀಲ ವಿಷ್ಣು ಶಂಕರ್ ಜೈನ್ ವಾದ ಮಂಡಿಸಿದ್ದರು. ಈ ಅರ್ಜಿ ಆಲಿಸಿದ ನ್ಯಾಯಾಲಯ ನಾಳೆ ಮಧ್ಯಾಹ್ನ 3ಗಂಟೆಯೊಳಗೆ ಪೀಠ ರಚಿಸುವುದಾಗಿ ತಿಳಿಸಿದೆ. ಜ್ಞಾನವಾಪಿ ಆವರಣದೊಳಗಿನ ಪ್ರದೇಶವನ್ನು ಸಂರಕ್ಷಿಸುವಂತೆ ಮೇ 17 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.