ಕರ್ನಾಟಕ

karnataka

ETV Bharat / bharat

ಹಸಿವಷ್ಟೇ ಅಲ್ಲ, ನೀರಿಲ್ಲದೆಯೂ ಜೀವ ಬಿಟ್ಟ ಮಗು : ಇದೆಂಥ ಅಮಾನವೀಯ ಘಟನೆ? - ಅಜ್ಜಿಯೊಂದಿಗೆ ಪ್ರಯಾಣಿಸುತ್ತಿದ್ದ ಬಾಲಕಿ ಸಾವು

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್​​, ಇದೊಂದು ಅವಮಾನಕರ ಘಟನೆ ಎಂದಿದ್ದಾರೆ. ಅಲ್ಲದೆ ಗೆಹ್ಲೋಟ್ ಸರ್ಕಾರ ಮತ್ತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ..

ನೀರಿಲ್ಲದೆಯೂ ಜೀವ ಬಿಟ್ಟ ಮಗು
ನೀರಿಲ್ಲದೆಯೂ ಜೀವ ಬಿಟ್ಟ ಮಗು

By

Published : Jun 8, 2021, 5:11 PM IST

ರಾಣಿವಾಡ (ರಾಜಸ್ಥಾನ): ಬಿಸಿಲಿನ ತಾಪ ಹೆಚ್ಚಾಗಿ, ಬಾಯಾರಿಕೆಯಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿಗೆ ಕುಡಿಯಲು ನೀರು ಸಿಗದೆ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತಹಸಿಲ್​​ನ ರೋಡಾ ಗ್ರಾಮದಲ್ಲಿ ನಡೆದಿದೆ.

ಜತೆಯಲ್ಲಿದ್ದ ವೃದ್ಧೆ ಕೂಡ ಮೂರ್ಛೆ ಹೋಗಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ರಾಣಿವಾಡ ಪೊಲೀಸರು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ರಾಯ್​ಪುರದಿಂದ ತನ್ನ ಅಜ್ಜಿಯೊಂದಿಗೆ ಐದು ವರ್ಷದ ಬಾಲಕಿ ನಡೆದುಕೊಂಡು ರೋಡಾ ಗ್ರಾಮದತ್ತ ಬರುತ್ತಿದ್ದರು. ಈ ವೇಳೆ ಉರಿಬಿಸಿಲು ತಾಳದೆ ಬಾಲಕಿ ಬಳಲಿದ್ದಾಳೆ. ಆ ವೇಳೆ ನೀರು ಸಿಗದೆ ಸ್ವಲ್ಪ ದೂರ ಕ್ರಮಿಸಿ ಪ್ರಾಣಬಿಟ್ಟಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ:ಓಡುವ ರೈಲು ಏರಲು ಯತ್ನಿಸಿ ಕೆಳಗೆಬಿದ್ದ ಪ್ರಯಾಣಿಕ.. ದೇವರಂತೆ ಬಂದು ಕಾಪಾಡಿದ ಜವಾನ​

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸರ್ಪಂಚ್​ ಕೃಷ್ಣರಾಜ್‌ ಪುರೋಹಿತ್​​, ವೈದ್ಯರನ್ನು ಕರೆಸಿ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕಾಶ್ ಜಾವಡೇಕರ್ ಕೆಂಡಾಮಂಡಲ:ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್​​, ಇದೊಂದು ಅವಮಾನಕರ ಘಟನೆ ಎಂದಿದ್ದಾರೆ. ಅಲ್ಲದೆ ಗೆಹ್ಲೋಟ್ ಸರ್ಕಾರ ಮತ್ತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

ABOUT THE AUTHOR

...view details