ಕರ್ನಾಟಕ

karnataka

ETV Bharat / bharat

ತಮಿಳುನಾಡಿನಲ್ಲಿ ಐತಿಹಾಸಿಕ ಕೃಷಿ ಬಜೆಟ್ ಮಂಡನೆ.. ಅನ್ನದಾತರಿಗೆ 34,220.65 ಕೋಟಿ ರೂ. ಮೀಸಲು!

ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡನೆ ಮಾಡಿದ್ದು, ಅನೇಕ ಮಹತ್ವದ ಯೋಜನೆ ಘೋಷಣೆ ಮಾಡಿದೆ.

By

Published : Aug 14, 2021, 5:13 PM IST

budget for agriculture
budget for agriculture

ಚೆನ್ನೈ(ತಮಿಳುನಾಡು): ತಮಿಳುನಾಡಿನಲ್ಲಿ ಹೊಸದಾಗಿ ಸರ್ಕಾರ ರಚನೆ ಮಾಡಿರುವ ಸ್ಟಾಲಿನ್​ ನೇತೃತ್ವದ ಡಿಎಂಕೆ ಇದೇ ಮೊದಲ ಸಲ ಕೃಷಿ ಬಜೆಟ್ ಮಂಡನೆ ಮಾಡಿದೆ. ಅನ್ನದಾತರ ಹಿತರಕ್ಷಣೆ ಹಾಗೂ ಕೃಷಿ ವಲಯದಲ್ಲಿ ಮತ್ತಷ್ಟು ಅಭಿವೃದ್ಧಿ ತರುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ತಮಿಳುನಾಡು ಕೃಷಿ ಸಚಿವ ಎಂಆರ್​ಕೆ ಪನ್ನಿರಸೇಲ್ವಂ ಬಜೆಟ್ ಮಂಡನೆ ಮಾಡಿದ್ದು, 2021-22ನೇ ಸಾಲಿನ ಬಜೆಟ್​ನಲ್ಲಿ ಕೃಷಿಗಾಗಿ Rs.34,220.65 ಕೋಟಿ ರೂ. ಮೀಸಲು ಇಟ್ಟಿದ್ದಾರೆ. ಪ್ರಮುಖವಾಗಿ ಪಶುಸಂಗೋಪನೆ, ಮೀನುಗಾರಿಕೆ, ಹೈನುಗಾರಿಕೆ ಅಭಿವೃದ್ಧಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ರೇಷ್ಮೆ ಕೃಷಿ ಮತ್ತು ಅರಣ್ಯ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

4,508.23 ಕೋಟಿ ರೂ. ರೈತರ ವಿದ್ಯುತ್ ಬಳಕೆಗೋಸ್ಕರ ವಿನಯೋಗ ಮಾಡಲಾಗುವುದು ಎಂದು ತಿಳಿಸಿರುವ ಸಚಿವರು, ರೈತರು ಬಳಕೆ ಮಾಡುವ ಪಂಪ್​ಸೆಟ್​ಗಳಿಗೆ ಉಚಿತವಾಗಿ ವಿದ್ಯುತ್​ ನೀಡುವುದಾಗಿ ತಿಳಿಸಿದ್ದಾರೆ.​ 1,245. 45 ಕೋಟಿ ರೂ. ಕೃಷಿ ಇಲಾಖೆ ಅಭಿವೃದ್ಧಿಗೆ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಯೋಜನೆಗಳಿಗೆ ಈಗಾಗಲೇ ಸ್ಟಾಲಿನ್ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಇಂದಿನ ಬಜೆಟ್​ ಕೂಡ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಅರ್ಪಣೆ ಮಾಡಿದೆ.

ಇದನ್ನೂ ಓದಿರಿ:ಅಬಕಾರಿ ಸುಂಕ ಕಡಿತ : ತಮಿಳುನಾಡಿನಲ್ಲಿ 100 ಗಡಿಯಿಂದ ಕೆಳಗಿಳಿದ ಪೆಟ್ರೋಲ್ ದರ

ಕೃಷಿ ಬಜೆಟ್​ನಲ್ಲಿ ಪ್ರಮುಖವಾಗಿ 16 ಅಂಶಗಳ ಮೇಲೆ ಕೆಲಸ ಮಾಡಲು ನಿರ್ಧರಿಸಲಾಗಿದ್ದು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಮುಂದಾಗಿರುವುದಾಗಿ ತಿಳಿಸಿದರು. ಜೊತೆಗೆ ಕೃಷಿ ವಲಯದತ್ತ ಯುವಕರನ್ನ ಸೆಳೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು. ನಿನ್ನೆ ಬಜೆಟ್ ಮಂಡನೆ ಮಾಡಿದ್ದ ಸ್ಟಾಲಿನ್​ ಸರ್ಕಾರ ಪೆಟ್ರೋಲ್​ ಮೇಲಿನ ಅಬಕಾರಿ ಸುಂಕ 3 ರೂಪಾಯಿ ಕಡಿತಗೊಳಿಸುವುದಾಗಿ ತಿಳಿಸಿದೆ.

ABOUT THE AUTHOR

...view details