ಕರೀಂನಗರ (ತೆಲಂಗಾಣ): ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಬುಧವಾರ ಮಧ್ಯರಾತ್ರಿಯ ನಂತರ ಕರೀಂನಗರದ ಅವರ ನಿವಾಸದಿಂದ ವಶಕ್ಕೆ ಪಡೆಯಲಾಗಿದೆ. ಕರೀಂನಗರದಲ್ಲಿರುವ ಸಂಸದರ ನಿವಾಸಕ್ಕೆ ಆಗಮಿಸಿದ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು. ಬಂಡಿ ಸಂಜಯ್ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಬಂಡಿ ಸಂಜಯ್ ಅವರನ್ನು ಪೊಲೀಸರು ಎಳೆದೊಯ್ದು ನಂತರ ಪೊಲೀಸ್ ವ್ಯಾನ್ನೊಳಗೆ ಕೂರಿಸಿದ್ದಾರೆ. ವರದಿಯ ಪ್ರಕಾರ, ಅವರನ್ನು ನಲ್ಗೊಂಡ ಜಿಲ್ಲೆಯ ಬೊಮ್ಮಲಾ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಇದೆ.
ಇದನ್ನು ಓದಿ:6 ಸಾವಿರ ಮಹಿಳೆಯರಿಗೆ 2 ಕೋಟಿ ರೂಪಾಯಿ ವಂಚಿಸಿದ ಇಬ್ಬರು ವಂಚಕರು ಅರೆಸ್ಟ್
ಪೊಲೀಸ್ ಕ್ರಮದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಈ ಬಂಧನದ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ಮಾತನಾಡಿದ್ದು, "ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರನ್ನು ಮಧ್ಯರಾತ್ರಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ಕರೀಂನಗರದ ಅವರ ನಿವಾಸದಿಂದ ಕಾನೂನು ಬಾಹಿರವಾಗಿ ಅವರನ್ನು ಎಳೆದೊಯ್ಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಬೆಳಗ್ಗೆವರೆಗೆ ಬಿಟ್ಟಿದ್ದರೆ ಏನಾಗುತ್ತಿತ್ತು. ಬಂಡಿ ಸಂಜಯ್ ಎಲ್ಲಿಗೆ ಹೋಗುತ್ತಿದ್ದರು ಎಂದು ಪ್ರೇಮೇಂದ್ರ ರೆಡ್ಡಿ ಪ್ರಶ್ನಿಸಿದ್ದಾರೆ.
ಇದು ತೆಲಂಗಾಣದಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದನ್ನು ಬಿಟ್ಟರೆ ಬೇರೇನೂ ಅಲ್ಲ ಎಂದು ತೆಲಂಗಾಣ ಪೊಲೀಸರ ವಿರುದ್ಧ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಡಿ ಸಂಜಯ್ ಬಗ್ಗೆ ಅವರು ನಮಗೆ ಏನನ್ನೂ ಹೇಳುತ್ತಿಲ್ಲ, ಅವರನ್ನು ಭೋಂಗಿರ್ಗೆ ಕರೆದೊಯ್ಯಲಾಗುತ್ತಿದೆ. ಅವರನ್ನು ಅಲ್ಲಿಗೆ ಏಕೆ ಕರೆದೊಯ್ಯಲಾಗುತ್ತಿದೆ? ಎಂದು ಅವರು ಪ್ರಶ್ನಿಸಿದ್ದಾರೆ.