ಹೈದರಾಬಾದ್:ಮಹಾರಾಷ್ಟ್ರದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಮರಾಠ ಸಮುದಾಯದ ಮೀಸಲಾತಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ. ಒಟ್ಟಾರೆ ಮೀಸಲಾತಿ ಶೇ. 50ಕ್ಕಿಂತಲೂ ಹೆಚ್ಚು ಇರುವಂತಿಲ್ಲ ಎಂದು ಹೇಳಿದ್ದು, ಮೀಸಲಾತಿ ಸಿಂಧುತ್ವ ರದ್ದುಗೊಳಿಸಿದೆ.
ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಮರಾಠ ಮೀಸಲಾತಿ ಸಮಾನತೆ ತತ್ವ ಉಲ್ಲಂಘಿಸಿದೆ ಎಂದು ಅಭಿಪ್ರಾಪಟ್ಟಿದೆ. ಜತೆಗೆ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಕ್ಕೆ ಶೇ.10ರ ಮೀಸಲಾತಿ ಮುಂದುವರೆಸುವಂತೆ ತಿಳಿಸಿದೆ.
ಸುಪ್ರೀಂಕೋರ್ಟ್ನ ಈ ತೀರ್ಪು ಇದೀಗ ದೇಶಾದ್ಯಂತ ಬಹುದೊಡ್ಡ ಪರಿಣಾಮ ಉಂಟು ಮಾಡುವ ಸಾಧ್ಯತೆ ಇದೆ. ಪ್ರಮುಖವಾಗಿ ತಮಿಳುನಾಡಿನಲ್ಲಿ ಶೇ 69ರಷ್ಟು ಮೀಸಲಾತಿ, ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳ ಮೇಲೆ ಇದು ಪರಿಣಾಮ ಬೀರಲಿದೆ. ಮೀಸಲಾತಿ ಎಂದರೆ ತುಳಿತಕ್ಕೊಳಗಾದ ವರ್ಗಗಳಿಗೆ ಲಾಭದಾಯಕ ಮಾರ್ಗವೇ? ಎಂದು ಸುಪ್ರೀಂಕೋರ್ಟ್ ಪ್ರಶ್ನೆ ಮಾಡಿದೆ.