ಕರ್ನಾಟಕ

karnataka

ETV Bharat / bharat

ಕೇಂದ್ರ ಸರ್ಕಾರ, ಚುನಾವಣಾ ಆಯೋಗ, ಆರ್​ಬಿಐಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.. ಯಾಕೆ ಅಂತೀರಾ?

Supreme Court: ಮತದಾರರಿಗೆ ಆಮಿಷ ಒಡ್ಡಲು ಎರಡು ರಾಜ್ಯ ಸರ್ಕಾರಗಳು ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದನ್ನು ಆಕ್ಷೇಪಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​, ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ಗೂ ನೋಟಿಸ್ ಜಾರಿ ಮಾಡಿದೆ.

By ETV Bharat Karnataka Team

Published : Oct 6, 2023, 1:35 PM IST

Supreme Court
ಕೇಂದ್ರ ಸರ್ಕಾರ, ಚುನಾವಣಾ ಆಯೋಗ, ಆರ್​ಬಿಐಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್...

ನವದೆಹಲಿ: ವಿಧಾನಸಭೆ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು ಬಳಸಲಾಗಿದೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ (ಎಸ್‌ಸಿ) ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ಹಾಗೂ ಆರ್‌ಬಿಐಗೂ ನೋಟಿಸ್ ಜಾರಿ ಮಾಡಿದೆ.

ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಉಚಿತ ಕೊಡುಗೆಗಳನ್ನು ನೀಡಲಾಗಿದೆ ಎಂದು ಆರೋಪಿಸಿರುವ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಕುರಿತು ಸುಪ್ರೀಂಕೋರ್ಟ್, ಈ ಎರಡು ರಾಜ್ಯ ಸರ್ಕಾರಗಳಿಗೆ ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಮತದಾರರಿಗೆ ಆಮಿಷ ಒಡ್ಡಲು ಎರಡು ರಾಜ್ಯ ಸರ್ಕಾರಗಳು ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದನ್ನು ಆಕ್ಷೇಪಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅನ್ವಯ, ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ಗೂ ನೋಟಿಸ್​ಗಳನ್ನು ನೀಡಿದೆ.

ಅರ್ಜಿದಾರರ ಪರ ವಕೀಲರು ಹೇಳಿದ್ದೇನು?:"ಚುನಾವಣೆಯ ಮೊದಲು ಸರ್ಕಾರವು ನಗದು ಹಂಚುವುದಕ್ಕಿಂತ ಕ್ರೂರವಾದ ಕಾರ್ಯ ಮತ್ತೊಂದಿಲ್ಲ. ಇದು ಪ್ರತಿ ಬಾರಿಯೂ ನಡೆಯುತ್ತಿದೆ ಮತ್ತು ಇದರಿಂದ ಅಂತಿಮವಾಗಿ ತೆರಿಗೆದಾರರ ಮೇಲೆ ಹೊರೆ ಬೀಳುತ್ತದೆ" ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ನಾಲ್ಕು ವಾರಗಳಲ್ಲಿ ಪ್ರಕ್ರಿಯೆಬೇಕು - ಸುಪ್ರೀಂ:''ನೀಡಿರುವ ನೋಟಿಸ್​ಗೆ ನಾಲ್ಕು ವಾರಗಳಲ್ಲಿ ಪ್ರಕ್ರಿಯೆ ನೀಡಬೇಕು'' ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ನ್ಯಾಯಾಲಯವು ಭಟ್ತುಲಾಲ್ ಜೈನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವೀಕರಿಸಿದೆ. ಈ ವಿಷಯದ ಕುರಿತು ಬಾಕಿ ಉಳಿದಿರುವ ಅರ್ಜಿಯೊಂದಿಗೆ ಟ್ಯಾಗ್ ಮಾಡಲು ಕೂಡಾ ಇದೇ ವೇಳೆ ಪೀಠ ಆದೇಶ ನೀಡಿದೆ.

ಇತ್ತೀಚೆಗೆ ವಿವಿಧ ರಾಜ್ಯಗಳ ಚುನಾವಣೆಗಳನ್ನು ಗೆಲ್ಲುವ ಧಾವಂತದಲ್ಲಿ ರಾಜಕೀಯ ಪಕ್ಷಗಳು ವಿವಿಧ ವರ್ಗದ ಮತದಾರರಿಗೆ ಉಚಿತ ಭರವಸೆ ನೀಡುವ ಹಲವು ಯೋಜನೆಗಳನ್ನು ಘೋಷಿಸಲು ಪೈಪೋಟಿ ನಡೆಸುತ್ತಿವೆ. ಸದ್ಯ ಸುಪ್ರೀ ಕೋರ್ಟ್​, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ಹಾಗೂ ಆರ್‌ಬಿಐಗೂ ನೋಟಿಸ್ ಜಾರಿ ಮಾಡಿರುವುದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದಂತೆ ಆಗಿದೆ.

ಪ್ರಸ್ತುತ ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದರೆ, ಆಡಳಿತದಲ್ಲಿ ಇರುವ ಪಕ್ಷಗಳು ಈಗಲೇ ಉಚಿತ ಯೋಜನೆಗಳನ್ನು ಜಾರಿಗೆ ಮಾಡುತ್ತಿವೆ. ಹೀಗಾಗಿ ಈ ಪ್ರಕರಣದಲ್ಲೀಗ ಸುಪ್ರೀಂಕೋರ್ಟ್​ನಲ್ಲಿ ಯಾವ ತೀರ್ಪು ಹೊರ ಬರುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ:ಎನ್​ಡಿಎ ಮೈತ್ರಿಕೂಟದಿಂದ ಜನಸೇನಾ ಹೊರಬರುವ ಬಗ್ಗೆ ವೈಎಸ್​ಆರ್​ ಕಾಂಗ್ರೆಸ್​ನಿಂದ ಅಪಪ್ರಚಾರ: ಪವನ್​ ಕಲ್ಯಾಣ್

ABOUT THE AUTHOR

...view details