ನವದೆಹಲಿ/ರಾಂಚಿ/ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಣದೊಂದಿಗೆ ಸಿಕ್ಕಿಬಿದ್ದ ಜಾರ್ಖಂಡ್ನ ಮೂವರು ಕಾಂಗ್ರೆಸ್ ಶಾಸಕರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಎಲ್ಲ ಶಾಸಕರು ಹಣದ ಸಂಪೂರ್ಣ ವಿವರ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಶನಿವಾರ ಸಂಜೆ ಜಾರ್ಖಂಡ್ನ ಮೂವರು ಕಾಂಗ್ರೆಸ್ ಶಾಸಕರಾದ ಡಾ.ಇರ್ಫಾನ್ ಅನ್ಸಾರಿ, ರಾಜೇಶ್ ಕಚ್ಚಪ್ ಮತ್ತು ನಮನ್ ವಿಕ್ಸಲ್ ಕೊಂಗಾಡಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರಾಣಿ ಹಾತ್ನಲ್ಲಿ ನೋಟುಗಳ ಚೀಲಗಳೊಂದಿಗೆ ಸಿಕ್ಕಿಬಿದ್ದಿದ್ದರು. ಈ ಶಾಸಕರು ತಮ್ಮ ಇಬ್ಬರು ಸಹಚರರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸರು ಹಿಡಿದಿದ್ದರು. ಈ ನೋಟುಗಳನ್ನು ಎಣಿಕೆ ಮಾಡಿದಾಗ ಒಟ್ಟು 48 ಲಕ್ಷ ರೂ. ಪತ್ತೆಯಾಗಿತ್ತು.
ಅಂತೆಯೇ, ರಾತ್ರಿಯೇ ಪೊಲೀಸರು ಮೂವರು ಶಾಸಕರನ್ನು ಬಂಧಿಸಿದ್ದರು. ಇದೀಗ ಮೂವರು ಶಾಸಕರು ವಾಹನ ಖರೀದಿ ಉದ್ದೇಶಕ್ಕಾಗಿ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಅದೇ ಕಾರಣಕ್ಕಾಗಿ ಹಣವನ್ನು ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಸರ್ಕಾರ ಒಂದಲ್ಲ ಒಂದು ವಿಷಯ ತಂದು ಸಂಸತ್ನಲ್ಲಿ ಗದ್ದಲ ಮಾಡ್ತಿದೆ: ಮಲ್ಲಿಕಾರ್ಜುನ ಖರ್ಗೆ