ಕರ್ನಾಟಕ

karnataka

ETV Bharat / bharat

ಚೆನ್ನೈನಲ್ಲಿ ಭಾರಿ ಮಳೆಯಿಂದ ವಿದ್ಯುತ್ ಅವಘಡ: ಮೂವರ ದುರ್ಮರಣ - ತಮಿಳನಾಡಿನಲ್ಲಿ ವಿದ್ಯುತ್ ಅವಘಡಗಳಿಂದ ಮೂವರ ಸಾವು

ತಮಿಳುನಾಡಿನಲ್ಲಿ ಚೆನ್ನೈನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ವಿದ್ಯುತ್ ಅವಘಡ ಸಂಭವಿಸಿ ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ.

Three die of electrocution as rain lashes Chennai
ಚೆನ್ನೈನಲ್ಲಿ ಭಾರಿ ಮಳೆಯಿಂದ ವಿದ್ಯುತ್ ಅವಘಡ: ಮೂವರ ದುರ್ಮರಣ

By

Published : Dec 31, 2021, 5:25 AM IST

ಚೆನ್ನೈ, ತಮಿಳುನಾಡು:ವಿದ್ಯುತ್ ಅವಘಡ ಸಂಭವಿಸಿ, ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈ ನಗರದಲ್ಲಿ ನಡೆದಿದೆ. ಭಾರಿ ಮಳೆಯ ಕಾರಣ ಈ ವಿದ್ಯುತ್ ಅವಘಡಗಳು ಸಂಭವಿಸಿವೆ.

ಚೆನ್ನೈನಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಭಾರಿ ಮಳೆ ಸುರಿದಿದ್ದು, ಹಲವಾರು ರಸ್ತೆಗಳಲ್ಲಿ ನೀರು ತುಂಬಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಇಷ್ಟೇ ಅಲ್ಲದೇ ಹಲವೆಡೆ ವಿದ್ಯುತ್ ಅವಘಡಗಳು ಸಂಭವಿಸಿದ್ದು, ಚೆನ್ನೈನ ಒಟ್ಟೆರಿ ಪ್ರದೇಶದಲ್ಲಿ 70 ವರ್ಷದ ಮಹಿಳೆ ತಮಿಳರಸಿ ಮೃತಪಟ್ಟಿದ್ದಾರೆ.

ಇದರ ಜೊತೆಗೆ ಉತ್ತರ ಪ್ರದೇಶ ಮೂಲದ ಹಾಗೂ ಸದ್ಯಕ್ಕೆ ಪುಲಿಯಂತೊಪ್ಪು ಪ್ರದೇಶದಲ್ಲಿ ವಾಸವಿರುವ 45 ವರ್ಷದ ಮಹಿಳೆ ಮೀನಾ, ಮೈಲಾಪೊರ್​ನ 13 ಬಾಲಕ ಲಕ್ಷ್ಮಣನ್ ಕೂಡಾ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ.

ಇನ್ನು ಮಳೆಯ ಕಾರಣಕ್ಕೆ ಚೆನ್ನೈ, ಕಂಚೀಪುರಂ, ಚೆಂಗಲ್​ಪಟ್ಟು ಮತ್ತು ತಿರುವಳ್ಳೂರ್​ನಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಣೆ ಮಾಡಿದೆ.

ಇದನ್ನೂ ಓದಿ:ಛತ್ತೀಸ್​ಗಢದ ನಕ್ಸಲ್​ ಪೀಡಿತ ಬಸ್ತಾರ್​ ಜಿಲ್ಲೆಯಲ್ಲಿ ಲೇಡಿ ಸಿಂಗಂ!

ABOUT THE AUTHOR

...view details