ಕರ್ನಾಟಕ

karnataka

ಮರಕ್ಕೆ ಡಿಕ್ಕಿ ಹೊಡೆದ ಬೈಕ್​: ಮೂವರು ಸ್ನೇಹಿತರು ದುರ್ಮರಣ

By

Published : Mar 21, 2021, 12:33 PM IST

Updated : Mar 21, 2021, 12:38 PM IST

ಮೂವರು ಸ್ನೇಹಿತರು ಬೈಕ್​ನಲ್ಲಿ ಹೋಗುತ್ತಿದ್ದಾಗ ಸವಾರನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ.

two-wheeler collision
two-wheeler collision

ವಿಶಾಖಪಟ್ಟಣಂ(ಆಂಧ್ರಪ್ರದೇಶ): ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ನೇಹಿತರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಕವರಾಪಲೆಂ ಬಳಿಯ ಪಿ.ಪಿ. ಅಗ್ರಹಾರಂ ಬಳಿ ಸಂಭವಿಸಿದೆ.

ಆರ್.ಹೇಮಂತ್, ಅನೀಶ್, ಹರ್ಷಿತ್ ಮೃತ ವಿದ್ಯಾರ್ಥಿಗಳು. ಇವರು ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಹೇಮಂತ್ ಮನೆಯಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆ ತನ್ನ ಸ್ನೇಹಿತರೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಮುಂದೆ ಬರುತ್ತಿದ್ದ ವಾಹನಕ್ಕೆ ದಾರಿ ಬಿಡಲು ಹೋಗಿ ಬೈಕ್ ​ಅನ್ನು ಮರಕ್ಕೆ ಗುದ್ದಿದ್ದಾನೆ. ಪರಿಣಾಮ ಸ್ಥಳದಲ್ಲೇ ಹೇಮಂತ್ ಮೃತಪಟ್ಟಿದ್ದು, ಅನೀಶ್ ಮತ್ತು ಹರ್ಷಿತ್ ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ನಿಯಂತ್ರಣ ತಪ್ಪಿ ಕಾರು ಪಲ್ಟಿ : ಶಿಕ್ಷಕ ಸ್ಥಳದಲ್ಲೇ ಸಾವು

ಈ ಕುರಿತು ಮಕವರಾಪಲೆಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಆ್ಯಂಬುಲೆನ್ಸ್​​ಗೆ ಟ್ರಕ್ ಡಿಕ್ಕಿ: ನಾಲ್ವರ ಸಾವು, ಮೂವರಿಗೆ ಗಾಯ

Last Updated : Mar 21, 2021, 12:38 PM IST

ABOUT THE AUTHOR

...view details