ಕರ್ನಾಟಕ

karnataka

ETV Bharat / bharat

ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕಕ್ಕೆ ಅವಕಾಶ ಬೇಡ : ತಮಿಳುನಾಡು ಸರ್ವಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ - tamilunadu resolution on Mekedatu project

ಸಿಎಂ ಎಂ ಕೆ ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಪಕ್ಷಗಳ ಶಾಸಕಾಂಗ ಸಭೆಯು ಕರ್ನಾಟಕ ಸರ್ಕಾರವು ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವುದನ್ನು ತಡೆಯಲು ಮತ್ತು ಮೇಕೆದಾಟುವಿನಲ್ಲಿ ಕರ್ನಾಟಕದ ಹೊಸ ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಅಂಗೀಕರಿಸಿದೆ..

TN parties passed resolution on karantaka new Mekadatu Project
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್

By

Published : Jul 12, 2021, 5:37 PM IST

ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಲಾಗಿದೆ. ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಸರ್ವಪಕ್ಷಗಳು ಒತ್ತಾಯಿಸಿವೆ. ಇಂದು ನಡೆದ ಸಭೆಯಲ್ಲಿ ಬಿಜೆಪಿ ಸೇರಿದಂತೆ ತಮಿಳುನಾಡಿನ 13 ಪಕ್ಷದ ಪ್ರತಿನಿಧಿಗಳು ಭಾಗವಹಿಸಿದ್ದರು. ಹಾಗೂ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ನಿರ್ಣಯ-1 :

ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ, ಕಾವೇರಿಯ ಅಧೀನ ರಾಜ್ಯಗಳ ಪೂರ್ವಾನುಮತಿ ಇಲ್ಲದೆ ಮೇಕೆದಾಟುವಿನಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಬಾರದು. ಅದನ್ನು ಮೀರಿ, ಅಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರದ ಪೂರ್ಣ ಪ್ರಮಾಣದ ಪ್ರಯತ್ನಗಳು ಖಂಡನೀಯ.

ಈ ಯೋಜನೆಯು ತಮಿಳುನಾಡು ರೈತರ ನೀರಿನ ಮೂಲದ ಮೇಲೂ ಪರಿಣಾಮ ಬೀರುತ್ತದೆ. ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಇಂತಹ ಪ್ರಯತ್ನ ಭಾರತದ ಸಂವಿಧಾನಕ್ಕೆ ಸವಾಲಾಗಿದೆ. ಆದ್ದರಿಂದ, ಯೋಜನೆಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಯೋಜನೆಗೆ ಯಾವುದೇ ಅನುಮತಿ ನೀಡಬಾರದು.

ನಿರ್ಣಯ-2:

ಮೇಕೆದಾಟುವಿನಲ್ಲಿ ಕರ್ನಾಟಕ ಯಾವುದೇ ಅಣೆಕಟ್ಟು ನಿರ್ಮಾಣ ಚಟುವಟಿಕೆಯನ್ನು ಕೈಗೊಳ್ಳದಂತೆ ತಡೆಯಲು ತಮಿಳುನಾಡು ಸರ್ಕಾರ ಕೈಗೊಂಡ ಎಲ್ಲಾ ಕ್ರಮಗಳಿಗೆ ರಾಜ್ಯದ ಎಲ್ಲಾ ಪಕ್ಷಗಳು ತಮ್ಮ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ನೀಡಲಿವೆ.

ನಿರ್ಣಯ-3:

ಮೇಕೆದಾಟು ಯೋಜನೆಗೆ ತಮಿಳುನಾಡಿನ ಜನರ ಒಟ್ಟಾರೆ ವಿರೋಧವನ್ನು ಬಿಂಬಿಸಲು, ಈ ಸಭೆಯ ನಿರ್ಣಯಗಳನ್ನು ವಿರೋಧದ ಮೊದಲ ಹೆಜ್ಜೆಯಾಗಿ ಎಲ್ಲಾ ಪಕ್ಷಗಳು ಕೇಂದ್ರ ಸರ್ಕಾರಕ್ಕೆ ಖುದ್ದಾಗಿ ಮಂಡಿಸಬೇಕು. ಹಾಗೂ ಆ ನಂತರ, ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​ನಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಅಗತ್ಯವಿದ್ದರೆ ಸರ್ಕಾರವು ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬ ಮಹತ್ವದ ಮೂರು ನಿರ್ಣಯಗಳಿಗೆ ಇಂದು ನಡೆದ ಸಭೆ ಅಂಗೀಕಾರ ನೀಡಿದೆ.

ABOUT THE AUTHOR

...view details