ಕರ್ನಾಟಕ

karnataka

ವಿದ್ಯಾರ್ಥಿನಿ ಸಾವು ಪ್ರಕರಣ: ಇಬ್ಬರು ಶಿಕ್ಷಕರ ಬಂಧನ

By

Published : Jul 18, 2022, 3:43 PM IST

ಗಣಿತ ಮತ್ತು ರಸಾಯನಶಾಸ್ತ್ರ ಬೋಧಿಸುವ ಇಬ್ಬರು ಶಿಕ್ಷಕರ ವಿರುದ್ಧ ಮೃತ ಬಾಲಕಿಯ ಕುಟುಂಬದವರು ಆರೋಪ ಮಾಡಿದ್ದಾರೆ. ಶಾಲಾ ಅಭ್ಯಾಸದ ವಿಷಯದಲ್ಲಿ ಈ ಇಬ್ಬರು ಶಿಕ್ಷಕರು ತಮ್ಮ ಮಗಳಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

TN violence: Two teachers detained for student's death
TN violence: Two teachers detained for student's death

ಕಲ್ಲಕುರಿಚಿ (ತಮಿಳು ನಾಡು):ವಿದ್ಯಾರ್ಥಿನಿಯೊಬ್ಬಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಗೆ ಹತ್ತಿರದ ಶಾಲೆಯೊಂದರ ಇಬ್ಬರು ಶಿಕ್ಷಕರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ, ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ಜುಲೈ 17 ರಂದು ಶಾಲೆಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಸುಮಾರು 300 ಪುರುಷರನ್ನು ಬಂಧಿಸಲಾಗಿದೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಹಿಂಸಾಚಾರ ನಡೆಸಿದ ಆರೋಪದ ಮೇಲೆ ಭಾನುವಾರ 70 ಜನರನ್ನು ಬಂಧಿಸಲಾಗಿದೆ ಮತ್ತು ಬಾಲಕಿಯ ಸಾವಿಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿಯಲ್ಲಿ ಹಿರಿಯ ಸ್ಥಾನಗಳನ್ನು ಹೊಂದಿರುವ ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ.

ಗಣಿತ ಮತ್ತು ರಸಾಯನಶಾಸ್ತ್ರ ಬೋಧಿಸುವ ಇಬ್ಬರು ಶಿಕ್ಷಕರ ವಿರುದ್ಧ ಮೃತ ಬಾಲಕಿಯ ಕುಟುಂಬದವರು ಆರೋಪ ಮಾಡಿದ್ದಾರೆ. ಶಾಲಾ ಅಭ್ಯಾಸದ ವಿಷಯದಲ್ಲಿ ಈ ಇಬ್ಬರು ಶಿಕ್ಷಕರು ತಮ್ಮ ಮಗಳಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇಲ್ಲಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಚಿನ್ನಸೇಲಂನ ಕಣಿಯಮೂರ್ ಪ್ರದೇಶದ ಖಾಸಗಿ ವಸತಿ ಶಾಲೆಯಲ್ಲಿ 12 ನೇ ತರಗತಿ ಓದುತ್ತಿದ್ದ 17 ವರ್ಷದ ಬಾಲಕಿ ಜುಲೈ 13 ರಂದು ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಕಲ್ಲಕುರಿಚಿ ಚೆನ್ನೈನಿಂದ ಸುಮಾರು 260 ಕಿ.ಮೀ ದೂರದಲ್ಲಿದೆ ಮತ್ತು ಉತ್ತರ ತಮಿಳುನಾಡಿನ ವಿಲ್ಲುಪುರಂ ಬಳಿ ಇದೆ. ಹಾಸ್ಟೆಲ್‌ನ ಮೂರನೇ ಮಹಡಿಯ ಕೊಠಡಿಯೊಂದರಲ್ಲಿ ವಾಸವಾಗಿದ್ದ ಬಾಲಕಿ ಮೇಲಿನ ಮಹಡಿಯಿಂದ ನೆಲಕ್ಕೆ ಜಿಗಿದು ಪ್ರಾಣ ಬಿಟ್ಟಿದ್ದಾಳೆ ಎಂದು ಶಂಕಿಸಲಾಗಿದೆ. ಆಕೆಯ ಸಾವಿಗೆ ಮುಂಚೆಯೇ ಆಕೆಯ ದೇಹದ ಮೇಲೆ ಗಾಯಗಳಾಗಿದ್ದವು ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿರುವುದಾಗಿ ಮೂಲಗಳು ಹೇಳಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತ ಬಾಲಕಿಯ ಪೋಷಕರು, ಸಂಬಂಧಿಕರು ಮತ್ತು ಕಡಲೂರು ಜಿಲ್ಲೆಯ ವೇಪ್ಪೂರ್‌ನ ಪೆರಿಯನಸಲೂರು ಗ್ರಾಮಕ್ಕೆ ಸೇರಿದ ಜನತೆ ಬಾಲಕಿಯ ಸಾವಿನ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದು, ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನು ಓದಿ:ಪಂಜಾಬ್​ನಲ್ಲಿ ಗ್ಯಾಂಗ್​ ವಾರ್​.. ಕಲ್ಲು ತೂರಾಟ, ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಜನರು

ABOUT THE AUTHOR

...view details