ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಹಾಗೂ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಾಕಿಸ್ತಾನ ಮೂಲದ ಉಗ್ರ ಮತ್ತು ಲಷ್ಕರ್-ಇ-ತೊಯ್ಬಾ ಎಲ್ಇಟಿ ಮುಖ್ಯ ಕಮಾಂಡರ್ ಅಬ್ರರ್ನನ್ನು ಶ್ರೀನಗರದ ಮಲೂರಾ ಪರಿಂಪೋರಾದಲ್ಲಿ ಹತ್ಯೆ ಮಾಡಲಾಗಿದೆ.
ಹೆದ್ದಾರಿಯಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಬಗ್ಗೆ ನಿರ್ದಿಷ್ಟ ಮಾಹಿತಿ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಸಿಆರ್ಪಿಎಫ್ ಯೋಧರು ಹೆದ್ದಾರಿ ಉದ್ದಕ್ಕೂ ನಾಕಾಬಂಧಿ ಹಾಕಿ ಕಾರ್ಯಾಚರಣೆಗೆ ಇಳಿದಿದ್ದರು. ಈ ವೇಳೆ ವಾಹನದಲ್ಲಿ ಬಂದಿದ್ದ ಇಬ್ಬರನ್ನು ತಪಾಸಣೆ ನಡೆಸುತ್ತಿದ್ದಾಗ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದ ವ್ಯಕ್ತಿ ತನ್ನ ಬ್ಯಾಗ್ನಲ್ಲಿದ್ದ ಗ್ರೆನೇಡ್ ಎಸೆಯಲು ಯತ್ನಿಸಿದ್ದಾರೆ. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದು ಠಾಣೆ ಕರೆತಂದು ವಿಚಾರಣೆ ನಡೆಸಿದಾಗ ಆತ ಲಷ್ಕರ್-ಇ-ತೊಯ್ಬಾ ಎಲ್ಇಟಿ ಅಗ್ರ ಕಮಾಂಡರ್ ಅಬ್ರರ್ ಎಂಬುದು ಗೊತ್ತಾಗಿದೆ.