ಕರ್ನಾಟಕ

karnataka

By

Published : Jul 19, 2021, 7:54 PM IST

ETV Bharat / bharat

ಚರಂಡಿ ನೀರಿನ ರಭಸಕ್ಕೆ ಕೊಚ್ಚಿ ಹೋದ ತಂದೆ-ಮಗ: ಘಟನೆಯ ವಿಡಿಯೋ ವೈರಲ್

ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದ ಕಾಲುವೆ ದಾಟಲು ಹೋಗಿ ಇಬ್ಬರು ಕೊಚ್ಚಿಕೊಂಡು ಹೋಗಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ.

Two people were washed away
Two people were washed away

ಮಾಧುಪುರ್​(ರಾಜಸ್ಥಾನ): ರಾಜಸ್ಥಾನದ ಅನೇಕ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

ಚರಂಡಿ ನೀರಿನ ರಭಸಕ್ಕೆ ಕೊಚ್ಚಿ ಹೋದ ತಂದೆ-ಮಗ

ರಾಜ್ಯದ ಮಾಧುಪುರ್​​ನಲ್ಲಿ ತುಂಬಿ ಹರಿಯುತ್ತಿದ್ದ ಚರಂಡಿ ನೀರಿನ ಕಾಲುವೆ ದಾಟುತ್ತಿದ್ದ ವೇಳೆ ತಂದೆ-ಮಗ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಕೆಲವರು ಘಟನೆಯ ವಿಡಿಯೋ ಸೆರೆ ಹಿಡಿದಿದ್ದಾರೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಚರಂಡಿ ಉಕ್ಕಿ ಹರಿಯುತ್ತಿತ್ತು. ಈ ವೇಳೆ ತಂದೆ-ಮಗ ರಸ್ತೆ ದಾಟಲು ಮುಂದಾಗಿದ್ದಾರೆ. ಆದರೆ ಕ್ಷಣಾರ್ಧದಲ್ಲಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

ಈ ವೇಳೆ ಸ್ಥಳದಲ್ಲಿ ಅನೇಕರದ್ದರೂ ಯಾರೂ ರಕ್ಷಣೆ ಮಾಡುವ ಧೈರ್ಯ ಮಾಡಿಲ್ಲ. ಅದೃಷ್ಟವಶಾತ್​, ಚರಂಡಿ ನೀರಿನ ಹರಿವಿನ ಜೊತೆ ತೇಲಿ ಹೋಗಿರುವ ಅವರು, ಪ್ರಾಣ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿ: ಕೋರ್ಟ್‌ನಲ್ಲಿ ವಾದ ಮುಗಿಸಿ ಮರಳುತ್ತಿದ್ದ ವಕೀಲನ ಮೇಲೆ ದುಷ್ಕರ್ಮಿಗಳಿಂದ ಮನಬಂದಂತೆ ಹಲ್ಲೆ

ABOUT THE AUTHOR

...view details