ಜಮ್ಮು- ಕಾಶ್ಮೀರ:ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಆಕಸ್ಮಿಕ ಗ್ರೆನೇಡ್ ಸ್ಫೋಟದಲ್ಲಿ ಜೆಸಿಒ ಸೇರಿದಂತೆ ಇಬ್ಬರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.
ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ಭಗವಾನ್ ಸಿಂಗ್ ಹುತಾತ್ಮ ಸೈನಿಕರು. ಮೆಂಧರ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ ಭಾಗದಲ್ಲಿ ಸೈನಿಕರು ಗಸ್ತು ತಿರುಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಈ ವೇಳೆ ಆರು ಸಿಬ್ಬಂದಿ ಗಾಯಗೊಂಡಿದ್ದಾರೆ. ತಕ್ಷಣವೇ ವಿಮಾನದಲ್ಲಿ ಉಧಂಪುರಕ್ಕೆ ಅವರನ್ನು ಸಾಗಿಸಲಾಯಿತು.