ಶ್ರೀನಗರ : ಶೋಪಿಯಾನ್ ಜಿಲ್ಲೆಯ ತ್ಸೆಮಾರ್ಗ್ ಗ್ರಾಮದಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಯೋಧರು ಬೇಟೆಯಾಡಿದ್ದಾರೆ. ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಕೈಗೊಂಡು ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
14 ಗಂಟೆಗಳ ಕಾಲಾ ಈ ಕಾರ್ಯಾಚರಣೆ ನಡೆದಿತ್ತು. ಅವನೀರಾ ಮತ್ತು ತ್ಸೆಮಾರ್ಗ್ ಸಾಮಾನ್ಯ ಪ್ರದೇಶದಲ್ಲಿ ಭಯೋತ್ಪಾದಕರ ಬಗ್ಗೆ ಮಾಹಿತಿ ದೊರೆತು ತ್ಸೆಮಾರ್ಗ್ನಲ್ಲಿ ಭಯೋತ್ಪಾದಕ ಅಡಗಿರುವ ಸ್ಥಳವನ್ನು ಪತ್ತೆ ಹಚ್ಚಲಾಗಿದೆ. ಭದ್ರತಾ ಪಡೆಗಳು ಶಂಕಿತ ಉಗ್ರರ ಮನೆಯ ಕಡೆಗೆ ಧಾವಿಸುತ್ತಿದ್ದಂತೆ ಅಲ್ಲಿ ಗುಂಡಿನ ದಾಳಿ ಶುರುವಾಗಿದೆ. ಕೂಡಲೇ ಎಚ್ಚೆತ್ತ ಸೈನಿಕರು ಸುತ್ತಲೂ ಇದ್ದ ಮನೆಗಳ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದರು. ಬಳಿಕ ಅಡಗಿ ಕುಳಿತಿದ್ದ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.