ಕರ್ನಾಟಕ

karnataka

ETV Bharat / bharat

ಸರ್ವಪಕ್ಷ ಸಭೆ ಮುಕ್ತಾಯ: ಕೃಷಿ ಕಾಯ್ದೆ ಸೇರಿ ಯಾವೆಲ್ಲ ವಿಷಯ ಚರ್ಚೆ!? - ಪ್ರಧಾನಿ ಮೋದಿ ಬಜೆಟ್​

ಸರ್ವಪಕ್ಷ ಸಭೆಯಲ್ಲಿ ಮಹತ್ವದ ಅಂಶಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಅಮೆರಿಕದಲ್ಲಿ ಮಹಾತ್ಮ ಗಾಂಧಿ ಧ್ವಂಸಗೊಳಿಸಿರುವುದಕ್ಕೆ ಪ್ರಧಾನಿ ಮೋದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Union Minister Pralhad Joshi
Union Minister Pralhad Joshi

By

Published : Jan 30, 2021, 4:01 PM IST

Updated : Jan 30, 2021, 4:10 PM IST

ನವದೆಹಲಿ:ಕೇಂದ್ರ ಬಜೆಟ್​ ಮಂಡನೆಗೂ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿಂದು ಸರ್ವಪಕ್ಷ ಸಭೆ ನಡೆಯಿತು. ಈ ವೇಳೆ ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚೆಯಾಯಿತು ಎಂಬ ವಿಷಯವಾಗಿ ಕೇಂದ್ರ ಸಂಸತ್ತಿನ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದಾರೆ.

ಮಾಹಿತಿ ನೀಡಿದ ಪ್ರಹ್ಲಾದ್ ಜೋಶಿ

ಇದನ್ನೂ ಓದಿ: ಕೇರಳದಿಂದ ಹೊಸದೊಂದು ದಾಖಲೆ.. 43 ಲಕ್ಷ ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್​​!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲ ಪಕ್ಷದ ಮುಖಂಡರು ಭಾಗಿಯಾಗಿದ್ದರು. ಲೋಕಸಭೆಯಲ್ಲಿ ಮಂಡನೆಯಾಗುವ ಬಿಲ್​, ನೂತನ ಕೃಷಿ ಕಾಯ್ದೆಗಳು ಹಾಗೂ ರೈತರ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆ ನಡೆಸಲು ಅವಕಾಶ ನೀಡುವಂತೆ ವಿಪಕ್ಷಗಳು ಕೇಳಿಕೊಂಡಿದ್ದು, ಅದಕ್ಕೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಈಗಾಗಲೇ ರೈತ ಸಂಘಟನೆ ಜತೆ ಕೇಂದ್ರ ಕೃಷಿ ಸಚಿವರು ಚರ್ಚೆ ನಡೆಸಿದ್ದು, ಹೊಸ ಕಾಯ್ದೆಗಳನ್ನ ಅಮಾನತಿನಲ್ಲಿಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಸರ್ಕಾರ ಈ ಆಫರ್​ಗೆ ಈಗಲೂ ಬದ್ಧವಾಗಿದ್ದು, ರೈತ ಸಂಘಟನೆಗಳ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇಂದು ಅಮೆರಿಕದಲ್ಲೂ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಲಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು. ಇದರ ಜತೆಗೆ ಭಾರತ ಎಲ್ಲ ದೇಶಗಳಿಗೂ ಹೆಚ್ಚಿನ ಕೊಡುಗೆ ನೀಡುತ್ತಿದ್ದು, ವ್ಯಾಕ್ಸಿನ್​ ವಿಚಾರದಲ್ಲಿ ಇದು ಸಾಭೀತುಗೊಂಡಿದೆ. ಹೀಗಾಗಿ ಎಲ್ಲ ಪಕ್ಷಗಳು ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದರು ಎಂದಿದ್ದಾರೆ.

Last Updated : Jan 30, 2021, 4:10 PM IST

ABOUT THE AUTHOR

...view details